Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...