Homeಫ್ಯಾಕ್ಟ್‌ಚೆಕ್FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಅಪಾರ್ಟ್‌ಮೆಂಟ್ ಒಂದರ ಮುಂಭಾಗದಲ್ಲಿ ನೂರಾರು ಜಾನುವಾರುಗಳನ್ನು ಹತ್ಯೆ ಮಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ‘ಪಶ್ಚಿಮ ಬಂಗಾಳದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರುಗಳ ಹತ್ಯೆ ಮಾಡಲಾಗಿದೆ’ ಎಂದು ಬರೆದುಕೊಳ್ಳಲಾಗಿದೆ.

“ಮಮತಾ ಬ್ಯಾನರ್ಜಿಗೆ ಯಾರಾದರೂ ಬೀಫ್ ಖಾದ್ಯವನ್ನು ಉಡುಗೊರೆಯಾಗಿ ನೀಡಿದ್ರಾ?
ಪಶ್ಚಿಮ ಬಂಗಾಳವನ್ನು ನೋಡಿ. ಇದು ಪಶ್ಚಿಮ ಬಂಗಾಳದಲ್ಲಿ ಈದ್ ಆಚರಿಸಿರುವುದು” ಎಂದು
Gayatri (@changu311) ಎಂಬ ಎಕ್ಸ್ ಬಳಕೆದಾರರು ವಿಡಿಯೋ ಸಹಿತ ಪೋಸ್ಟ್ ಹಾಕಿದ್ದಾರೆ.

JIX5A (@changu311) ಎಂಬ ಮತ್ತೊಬ್ಬರು ಬಳಕೆದಾರರು ಕೂಡ “ಇದು ಹಾಲಿವುಡ್ ಸಿನಿಮಾದ ಹಾರರ್ ದೃಶ್ಯಗಳು ಎಂದು ತಪ್ಪಾಗಿ ಗ್ರಹಿಸಬಹುದು. ವಾಸ್ತವದಲ್ಲಿ, ಇದು ಪಶ್ಚಿಮ ಬಂಗಾಳದ ಬೀದಿಗಳು ಮುಗ್ಧ ಜೀವಿಗಳ ಹತ್ಯೆಯಿಂದ ರಕ್ತಸಿಕ್ತವಾಗಿರುವುದು. ಮಮತಾ ಜಿ-ಹದನ್ ಅವರ ಮತ ಬ್ಯಾಂಕ್” ಎಂದು ಬರೆದುಕೊಂಡು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್ ಮಾಡಿದಾಗ Ashwini Shrivastava (@AshwiniSahaya) ಎಂಬ ಎಕ್ಸ್‌ ಬಳಕೆದಾರರು ಜುಲೈ 1,2023ರಲ್ಲಿ ಇದೇ ವೈರಲ್ ವಿಡಿಯೋ ಪೋಸ್ಟ್ ಮಾಡಿ “ಇದು ಭಾರತದಲ್ಲಿ ಹಿಂದೂಗಳು ಬಣ್ಣದ ಹಬ್ಬ ಹೋಳಿ ಆಚರಿಸುತ್ತಿರುವುದು? ಅಲ್ಲ, ಈ ದೃಶ್ಯ ಬಾಂಗ್ಲಾ ದೇಶದ ಢಾಕಾದಲ್ಲಿರುವ ವಸತಿ ಸಂಕೀರ್ಣದ ಈದುಲ್ ಅದ್ಹಾದ (ಬಕ್ರೀದ್ 2023) ದೃಶ್ಯವಾಗಿದೆ” ಎಂದು ಬರೆದುಕೊಂಡಿದ್ದಾರೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಅಕ್ಟೋಬರ್ 24,2022 ರಂದು ‘ಅಮರ್ ಚೋಖ್‘ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋದಲ್ಲಿ ಜಾನುವಾರುಗಳನ್ನು ಹತ್ಯೆ ಮಾಡಿರುವ ವಸತಿ ಸಂಕೀರ್ಣವನ್ನು ಕಾಣಬಹುದು.

ವಿಡಿಯೋದಲ್ಲಿ ಬಂಗಾಳಿ ಭಾಷೆಯಲ್ಲಿ ‘ದೃಷ್ಟಿನಂದನ್ ಮಿರ್ಪುರ್ ಸಗುಫ್ತಾ ಸ್ವಪ್ನಾನಗರ ರೆಸಿಡೆನ್ಶಿಯಲ್ ಫ್ಲಾಟ್ ಪ್ರಾಜೆಕ್ಟ್‌ನ ಡ್ರೀಮ್ ಸಿಟಿ ವಸತಿ ಯೋಜನೆ” ಎಂದು ಕ್ಯಾಪ್ಶನ್ ಕೊಡಲಾಗಿದೆ.

ಒಟ್ಟು 3 ನಿಮಿಷ 43 ಸೆಕೆಂಡ್‌ನ ಯೂಟ್ಯೂಬ್‌ ವಿಡಿಯೋದಲ್ಲಿ 1 ನಿಮಿಷ 6 ಸೆಕೆಂಡ್‌ನಿಂದ 3 ನಿಮಿಷದ ನಡುವೆ ನಾವು ವೈರಲ್ ವಿಡಿಯೋದಲ್ಲಿರುವ ವಸತಿ ಸಂಕೀರ್ಣವನ್ನು ನೋಡಬಹುದು. ಅಲ್ಲದೆ, ವೈರಲ್ ವಿಡಿಯೋದಲ್ಲಿ ಕಟ್ಟಡದ ಮುಂದೆ ಕೆಂಪು ಬಣ್ಣದ ಟೈಲ್ಸ್ ಹಾಕಲಾಗಿದೆ. ಅದೇ ಬಣ್ಣದ ಟೈಲ್ಸ್ ಯೂಟ್ಯೂಬ್ ವಿಡಿಯೋದಲ್ಲೂ ಇದೆ.

ಅಷ್ಟೇ ಅಲ್ಲದೆ ಗೂಗಲ್ ಮ್ಯಾಪ್‌ನಲ್ಲೂ ಸಂಪೂರ್ಣ ವಸತಿ ಸಮುಚ್ಚಯದ ಫೋಟೋಗಳನ್ನು ನೋಡಬಹುದು.

ಗೂಗಲ್ ಅರ್ಥ್‌ನಲ್ಲೂ ಕಟ್ಟಡದ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಅದು ವೈರಲ್ ವಿಡಿಯೋದಲ್ಲಿರುವ ಕಟ್ಟಡದ ಮುಂಭಾಗದ ಮೈದಾನವನ್ನು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸ್ವಪ್ನ ನಗರ ರೆಸಿಡೆನ್ಶಿಯಲ್ ಏರಿಯಾದ ಆಟದ ಮೈದಾನ ಎಂದು ತೋರಿಸಿದೆ.

ನಾವು ವಿವಿಧ ಆಯಾಮಗಳಲ್ಲಿ ನಡೆಸಿದ ಪರಿಶೀಲನೆಯಲ್ಲಿ, ಜಾನುವಾರುಗಳನ್ನು ಹತ್ಯೆ ಮಾಡಿರುವ ವೈರಲ್ ವಿಡಿಯೋದಲ್ಲಿರುವ ಕಾಣಿಸಿಕೊಂಡಿರುವ ಕಟ್ಟಡ ಬಾಂಗ್ಲಾದೇಶದ್ದು ಎಂದು ತಿಳಿದು ಬಂದಿದೆ. ಹಾಗಾಗಿ, ಜಾನುವಾರುಗಳ ಹತ್ಯೆಯ ವಿಡಿಯೋ ಕೂಡ ಪಶ್ಚಿಮ ಬಂಗಾಳದಲ್ಲ ಬಾಂಗ್ಲಾದೇಶದ್ದು ಎಂದು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...