Homeಫ್ಯಾಕ್ಟ್‌ಚೆಕ್FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ, ಅನಿರೀಕ್ಷಿತ ಪ್ರವಾಹಗಳು ಸಂಭವಿಸಿವೆ. ಅನೇಕ ಜನರು ತಮ್ಮ  ಗ್ರಾಮ ಮತ್ತು ಮನೆಗಳನ್ನು ತೊರೆದು ಕಾಳಜಿ ಕೇಂದ್ರವನ್ನು ಆಶ್ರಯಿಸಿದ್ದಾರೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಶಾಲಾ ಸಮವಸ್ತ್ರ ಧರಿಸಿ ಮಕ್ಕಳು ತಮ್ಮ ಜೀವವನ್ನು ಲೆಕ್ಕಿಸದೆ ಕೇಬಲ್ ಸಹಾಯದಿಂದ ನದಿ ದಾಟುತ್ತಿರುವುದನ್ನು ಕಾಣಬಹುದು.

 

ತಮ್ಮ ಜೀವವನ್ನು ಲೆಕ್ಕಿಸದೆ ಪುಲ್ಲಿ ಕೇಬಲ್ ಬಳಸಿ ನದಿ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕ್ಕಳು ಕೇಬಲ್ ದಾಟುತ್ತಿರುವಾಗ ಕೆಳಗೆ ನದಿಯು ರಭಸವಾಗಿ ಹರಿಯುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ‘‘ಸರ್ಕಾರ ಧಾರ್ಮಿಕ ಯಾತ್ರೆಗಳತ್ತ ಗಮನ ಹರಿಸುವುದನ್ನು ಬಿಟ್ಟು. ಈ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ರಸ್ತೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು  ಪ್ರಯತ್ನ ಪಡಬೇಕು ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ಆದ  ವಿಡಿಯೋ ಭಾರತ ದೇಶಕ್ಕೆ ಸಂಬಂಧಿಸಿದ್ದಲ್ಲ, ಈ  ವಿಡಿಯೋ ನೇಪಾಳದ್ದು ಎಂಬ ಮಾಹಿತಿ ಲಭ್ಯವಾಗಿದೆ.

 

ಇನ್‌ಸ್ಟಾಗ್ರಾಮ್‌ ಖಾತೆದಾರರು ತಮ್ಮ ಖಾತೆಯಲ್ಲಿ “The Daily struggle of Nepal Students” ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ ನಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

ಫ್ರೀ ಡಾಕ್ಯುಮೆಂಟರಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “most Dangerous ways of School I Nepal I Free Documentary” ಎಂಬ ಶೀರ್ಷಿಕೆಯೊಂದಿಗಿರುವ ವಿಡಿಯೋವೊಂದು ಲಭ್ಯವಾಗಿದ್ದು, ಇದು ನೇಪಾಳದ ಶಾಲಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಷ್ಟ ಎಂದು ವಿಡಿಯೋವಿನಲ್ಲಿ ಹೇಳಲಾಗಿದೆ. ವಿಡಿಯೋಗೆ ನೀಡಿರುವ ಡಿಸ್ಕ್ರಿಪ್ಷನ್‌ನಲ್ಲಿ ಕುಂಪೂರದ ಪರ್ವತ ಗ್ರಾಮದಲ್ಲಿರುವ ಶಾಲಾ ಮಕ್ಕಳು ಶಾಲೆಗೆ ಹೋಗಲು ವಿದ್ಯಾರ್ಥಿಗಳು ಬೆಟ್ಟ ಗುಡ್ಡಗಳನ್ನು ದಾಟಿ ನಡೆದುಕೊಂಡು ಹೋಗಬೇಕು ಎಂದಿದೆ.

ಮಕ್ಕಳ ಕುಟುಂಬದವರು ಪ್ರತಿ ನಿತ್ಯ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ತಮ್ಮ ಮಕ್ಕಳನ್ನು ಒಂದು ದಿನ ಬಿಟ್ಟು ಮತ್ತೊಂದು ದಿನ ಶಾಲೆಗೆ ಕಳುಹಿಸುತ್ತಾರೆ ಎಂದು ಬರೆಯಲಾಗಿದೆ. ನಾವು IMDb ಪೇಜ್‌ನಲ್ಲೂ ಈ ಸುದ್ದಿಗೆ ಸಂಬಂಧಿಸಿದ ವಿಡಯೋವೊಂದು ಕಂಡುಕೊಂಡಿದ್ದು,ಈ ವಿಡಿಯೋವಿಗೆ “The Most Dangerous Ways to School” ಎಂಬ ಸಾಕ್ಷ್ಯಚಿತ್ರ ಸರಣಿಯಲ್ಲಿರುವ ಒಂದು ಸಂಚಿಕೆಯಲ್ಲಿ ಈ ಸುದ್ದಿಯ ಕುರಿತು ನೋಡಬಹುದು. ಮೇ 2024ರಲ್ಲಿ ಕೇರಳದ ಶಾಲಾ ವಿದ್ಯಾರ್ಥಿಗಳ ದುಸ್ಥಿತಿಯಿದು ಎಂದು ವೈರಲ್‌ ಆದ ಸುದ್ದಿಯನ್ನು ಹಲವಾರು ಫ್ಯಾಕ್ಟ್‌ಚೆಕ್‌ ಸಂಸ್ಥೆಗಳು ವೈರಲ್‌ ಸುದ್ದಿ ನಿಜವಲ್ಲ ಎಂದು ವರದಿ ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ಶಾಲಾ ವಿದ್ಯಾರ್ಥಿಗಳು ಕೇಬಲ್ ಕಾರ್ ಸೇತುವೆಯನ್ನು ಬಳಸಿ ನದಿ ದಾಟುತ್ತಿರುವ ದೃಶ್ಯವನ್ನು ಭಾರತದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಇಂಗ್ಲೆಂಡ್ ಪೊಲೀಸರು ಮುಸ್ಲಿಮರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...