Homeಫ್ಯಾಕ್ಟ್‌ಚೆಕ್FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

FACT CHECK : ಶಾಲಾ ಮಕ್ಕಳು ಕೇಬಲ್ ಕಾರ್ ಬಳಸಿ ನದಿ ದಾಟುವ ವಿಡಿಯೋ ಭಾರತದ್ದಲ್ಲ

- Advertisement -
- Advertisement -

ಭಾರತದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ, ಅನಿರೀಕ್ಷಿತ ಪ್ರವಾಹಗಳು ಸಂಭವಿಸಿವೆ. ಅನೇಕ ಜನರು ತಮ್ಮ  ಗ್ರಾಮ ಮತ್ತು ಮನೆಗಳನ್ನು ತೊರೆದು ಕಾಳಜಿ ಕೇಂದ್ರವನ್ನು ಆಶ್ರಯಿಸಿದ್ದಾರೆ. ಇತ್ತ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಶಾಲಾ ಸಮವಸ್ತ್ರ ಧರಿಸಿ ಮಕ್ಕಳು ತಮ್ಮ ಜೀವವನ್ನು ಲೆಕ್ಕಿಸದೆ ಕೇಬಲ್ ಸಹಾಯದಿಂದ ನದಿ ದಾಟುತ್ತಿರುವುದನ್ನು ಕಾಣಬಹುದು.

 

ತಮ್ಮ ಜೀವವನ್ನು ಲೆಕ್ಕಿಸದೆ ಪುಲ್ಲಿ ಕೇಬಲ್ ಬಳಸಿ ನದಿ ದಾಟುತ್ತಿರುವ ವಿಡಿಯೋ ವೈರಲ್ ಆಗಿದೆ. ಮಕ್ಕಳು ಕೇಬಲ್ ದಾಟುತ್ತಿರುವಾಗ ಕೆಳಗೆ ನದಿಯು ರಭಸವಾಗಿ ಹರಿಯುತ್ತಿರುವುದನ್ನು ನಾವು ವಿಡಿಯೋದಲ್ಲಿ ಕಾಣಬಹುದು. ‘‘ಸರ್ಕಾರ ಧಾರ್ಮಿಕ ಯಾತ್ರೆಗಳತ್ತ ಗಮನ ಹರಿಸುವುದನ್ನು ಬಿಟ್ಟು. ಈ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ರಸ್ತೆ, ಮೂಲ ಸೌಕರ್ಯಗಳನ್ನು ಕಲ್ಪಿಸಲು  ಪ್ರಯತ್ನ ಪಡಬೇಕು ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೊಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್‌ಆದ  ವಿಡಿಯೋ ಭಾರತ ದೇಶಕ್ಕೆ ಸಂಬಂಧಿಸಿದ್ದಲ್ಲ, ಈ  ವಿಡಿಯೋ ನೇಪಾಳದ್ದು ಎಂಬ ಮಾಹಿತಿ ಲಭ್ಯವಾಗಿದೆ.

 

ಇನ್‌ಸ್ಟಾಗ್ರಾಮ್‌ ಖಾತೆದಾರರು ತಮ್ಮ ಖಾತೆಯಲ್ಲಿ “The Daily struggle of Nepal Students” ಎಂಬ ಶೀರ್ಷಿಕೆಯೊಂದಿಗೆ ಇನ್‌ಸ್ಟಾಗ್ರಾಮ್‌ ನಲ್ಲಿ ವಿಡಿಯೋವನ್ನು ಪೋಸ್ಟ್‌ ಮಾಡಿದ್ದಾರೆ.

ಫ್ರೀ ಡಾಕ್ಯುಮೆಂಟರಿ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ “most Dangerous ways of School I Nepal I Free Documentary” ಎಂಬ ಶೀರ್ಷಿಕೆಯೊಂದಿಗಿರುವ ವಿಡಿಯೋವೊಂದು ಲಭ್ಯವಾಗಿದ್ದು, ಇದು ನೇಪಾಳದ ಶಾಲಾ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಷ್ಟ ಎಂದು ವಿಡಿಯೋವಿನಲ್ಲಿ ಹೇಳಲಾಗಿದೆ. ವಿಡಿಯೋಗೆ ನೀಡಿರುವ ಡಿಸ್ಕ್ರಿಪ್ಷನ್‌ನಲ್ಲಿ ಕುಂಪೂರದ ಪರ್ವತ ಗ್ರಾಮದಲ್ಲಿರುವ ಶಾಲಾ ಮಕ್ಕಳು ಶಾಲೆಗೆ ಹೋಗಲು ವಿದ್ಯಾರ್ಥಿಗಳು ಬೆಟ್ಟ ಗುಡ್ಡಗಳನ್ನು ದಾಟಿ ನಡೆದುಕೊಂಡು ಹೋಗಬೇಕು ಎಂದಿದೆ.

ಮಕ್ಕಳ ಕುಟುಂಬದವರು ಪ್ರತಿ ನಿತ್ಯ ಭಯದಿಂದಲೇ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ತಮ್ಮ ಮಕ್ಕಳನ್ನು ಒಂದು ದಿನ ಬಿಟ್ಟು ಮತ್ತೊಂದು ದಿನ ಶಾಲೆಗೆ ಕಳುಹಿಸುತ್ತಾರೆ ಎಂದು ಬರೆಯಲಾಗಿದೆ. ನಾವು IMDb ಪೇಜ್‌ನಲ್ಲೂ ಈ ಸುದ್ದಿಗೆ ಸಂಬಂಧಿಸಿದ ವಿಡಯೋವೊಂದು ಕಂಡುಕೊಂಡಿದ್ದು,ಈ ವಿಡಿಯೋವಿಗೆ “The Most Dangerous Ways to School” ಎಂಬ ಸಾಕ್ಷ್ಯಚಿತ್ರ ಸರಣಿಯಲ್ಲಿರುವ ಒಂದು ಸಂಚಿಕೆಯಲ್ಲಿ ಈ ಸುದ್ದಿಯ ಕುರಿತು ನೋಡಬಹುದು. ಮೇ 2024ರಲ್ಲಿ ಕೇರಳದ ಶಾಲಾ ವಿದ್ಯಾರ್ಥಿಗಳ ದುಸ್ಥಿತಿಯಿದು ಎಂದು ವೈರಲ್‌ ಆದ ಸುದ್ದಿಯನ್ನು ಹಲವಾರು ಫ್ಯಾಕ್ಟ್‌ಚೆಕ್‌ ಸಂಸ್ಥೆಗಳು ವೈರಲ್‌ ಸುದ್ದಿ ನಿಜವಲ್ಲ ಎಂದು ವರದಿ ಮಾಡಿವೆ.

ಒಟ್ಟಾರೆಯಾಗಿ ಹೇಳುವುದಾದರೆ, ನೇಪಾಳದ ಶಾಲಾ ವಿದ್ಯಾರ್ಥಿಗಳು ಕೇಬಲ್ ಕಾರ್ ಸೇತುವೆಯನ್ನು ಬಳಸಿ ನದಿ ದಾಟುತ್ತಿರುವ ದೃಶ್ಯವನ್ನು ಭಾರತದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ಇಂಗ್ಲೆಂಡ್ ಪೊಲೀಸರು ಮುಸ್ಲಿಮರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...