Homeಫ್ಯಾಕ್ಟ್‌ಚೆಕ್FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್‌ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಗಸ್ಟ್ 9, 2024ರಂದು ತರಬೇತಿ ವೈದ್ಯೆಯೊಬ್ಬರನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ದೇಶದಾದ್ಯಂತ ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಪ್ರಸ್ತುತ ಆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಮಾಡುತ್ತಿದೆ.

ಈಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಅದು ಅತ್ಯಾಚಾರ, ಕೊಲೆ ಘಟನೆಯ ಸಂತ್ರಸ್ತೆ ವೈದ್ಯೆಯ ಕೊನೆಯ ಕ್ಷಣದ್ದು, ಅಂದರೆ, ಆಕೆ ಸಾಯುವ ಮುನ್ನ ಅಂತಿಮ ಕ್ಷಣದ್ದು ಎಂದು ಹೇಳಲಾಗಿದೆ.

ಆರ್‌ಜಿ ಕರ್‌ ಘಟನೆಯಲ್ಲಿ ಸಾವನ್ನಪ್ಪಿದ ವೈದ್ಯೆಯಂತೆ ಹೋಲುವ ಮಹಿಳೆಯೊಬ್ಬರು ತನ್ನ ಕತ್ತು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವಂತಹ ದೃಶ್ಯ ಆ ವಿಡಿಯೋದಲ್ಲಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮೃತ ವೈದ್ಯೆಯದ್ದು ಅಲ್ಲ, ಅದು ಕೋಲ್ಕತ್ತಾದ ಮೇಕಪ್ ಕಲಾವಿದೆ ಝೀನತ್ ರಹ್ಮಾನ್ ಎಂಬವರದ್ದಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಹಾಕಿ ನಾವು ಮಾಹಿತಿ ಹುಡುಕಿದಾಗ ಮುದಸ್ಸಿರ್ ದಾರ್ ಎಂಬ ಎಕ್ಸ್ ಬಳಕೆದಾರ ಆಗಸ್ಟ್ 17ರಂದು ವೈರಲ್ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಮುದಸ್ಸಿರ್ ಅವರು ತನ್ನ ಪೋಸ್ಟ್‌ನಲ್ಲಿ “ಕೊನೆಯ ಬಾರಿ ಮೃತ ವೈದ್ಯೆ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವುದು” ಎಂದು ಬರೆದುಕೊಂಡಿದ್ದಾರೆ. ಜೊತೆ ಒರಿಜಿನಲ್ ವಿಡಿಯೋ ಸೃಷ್ಟಿಸಿರುವುದು ಝೀನತ್ ರಹ್ಮಾನ್ ಎಂದು ತಿಳಿಸಿದ್ದಾರೆ.

ಆಗಸ್ಟ್ 18,2024ರಂದು ಮುನ್ನಿ ಠಾಕೂರ್ ಎಂಬ ಫೇಸ್‌ಬುಕ್‌ ಬಳಕೆದಾರರು ವೈರಲ್ ವಿಡಿಯೋ ಪೋಸ್ಟ್ ಮಾಡಿದ್ದರು. ಅಲ್ಲೂ ಒರಿಜಿನಲ್ ವಿಡಿಯೋ ಸೃಷ್ಟಿಸಿದವರು ಝೀನತ್ ರಹ್ಮಾನ್ ಎಂದು ಬರೆದುಕೊಂಡಿದ್ದರು.

ಝೀನತ್ ರಹ್ಮಾನ್ ಎಂಬವರ ಬಗ್ಗೆ ಮಾಹಿತಿ ಹುಡುಕಿದಾಗ, ಅವರು ಕೋಲ್ಕತ್ತಾದ ಮೇಕಪ್ ಕಲಾವಿದೆಯಾಗಿದ್ದು, ಬಹಳ ಹಿಂದಿನಿಂದಲೂ ಅತ್ಯಾಚಾರದ ಕೃತ್ಯಗಳ ವಿರುದ್ದ ವಿಶಿಷ್ಟ ರೀತಿಯಲ್ಲಿ ತನ್ನ ಪ್ರತಿಭಟನೆ ವ್ಯಕ್ತಪಡಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ. ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದಾಗ ಅನೇಕ ವಿಡಿಯೋಗಳು ಕಂಡು ಬಂದಿವೆ.

ಒಟ್ಟಿನಲ್ಲಿ, ಇತರ ಹಲವು ಅತ್ಯಾಚಾರ ಘಟನೆಗಳನ್ನು ವಿಶಿಷ್ಟ ರೀತಿಯಲ್ಲಿ ಖಂಡಿಸಿದಂತೆ ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ ಘಟನೆಯನ್ನು ವಿಶಿಷ್ಟ ಮೇಕಪ್, ನಟನೆಯ ಮೂಲಕ ಕಲಾವಿದೆ ಝೀನತ್ ಖಂಡಿಸಿದ್ದಾರೆ. ಅದರ ವಿಡಿಯೋವನ್ನು ಕೆಲವರು ಆರ್‌ಜಿ ಕರ್ ಆಸ್ಪತ್ರೆಯ ಘಟನೆಯ ಸಂತ್ರಸ್ತೆಯ ನಿಜವಾದ ವಿಡಿಯೋ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ.

ಗಮನಿಸಿ : ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಕೋಲ್ಕತ್ತಾ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಫೋಟೋ ಮತ್ತು ಹೆಸರು ಇರುವುದರಿಂದ, ನಾವು ಅವುಗಳ ಸ್ಕ್ರೀನ್ ಶಾಟ್ ಮತ್ತು ಲಿಂಕ್ ಅನ್ನು ಸುದ್ದಿಯಲ್ಲಿ ಸೇರಿಸಿಲ್ಲ

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...