Homeಫ್ಯಾಕ್ಟ್‌ಚೆಕ್FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್‌ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಆಗಸ್ಟ್ 9, 2024ರಂದು ತರಬೇತಿ ವೈದ್ಯೆಯೊಬ್ಬರನ್ನು ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಘಟನೆ ದೇಶದಾದ್ಯಂತ ಭಾರೀ ಜನಾಕ್ರೋಶಕ್ಕೆ ಕಾರಣವಾಗಿತ್ತು. ಪ್ರಸ್ತುತ ಆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಮಾಡುತ್ತಿದೆ.

ಈಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಅದು ಅತ್ಯಾಚಾರ, ಕೊಲೆ ಘಟನೆಯ ಸಂತ್ರಸ್ತೆ ವೈದ್ಯೆಯ ಕೊನೆಯ ಕ್ಷಣದ್ದು, ಅಂದರೆ, ಆಕೆ ಸಾಯುವ ಮುನ್ನ ಅಂತಿಮ ಕ್ಷಣದ್ದು ಎಂದು ಹೇಳಲಾಗಿದೆ.

ಆರ್‌ಜಿ ಕರ್‌ ಘಟನೆಯಲ್ಲಿ ಸಾವನ್ನಪ್ಪಿದ ವೈದ್ಯೆಯಂತೆ ಹೋಲುವ ಮಹಿಳೆಯೊಬ್ಬರು ತನ್ನ ಕತ್ತು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವಂತಹ ದೃಶ್ಯ ಆ ವಿಡಿಯೋದಲ್ಲಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಮೃತ ವೈದ್ಯೆಯದ್ದು ಅಲ್ಲ, ಅದು ಕೋಲ್ಕತ್ತಾದ ಮೇಕಪ್ ಕಲಾವಿದೆ ಝೀನತ್ ರಹ್ಮಾನ್ ಎಂಬವರದ್ದಾಗಿದೆ.

ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಹಾಕಿ ನಾವು ಮಾಹಿತಿ ಹುಡುಕಿದಾಗ ಮುದಸ್ಸಿರ್ ದಾರ್ ಎಂಬ ಎಕ್ಸ್ ಬಳಕೆದಾರ ಆಗಸ್ಟ್ 17ರಂದು ವೈರಲ್ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಮುದಸ್ಸಿರ್ ಅವರು ತನ್ನ ಪೋಸ್ಟ್‌ನಲ್ಲಿ “ಕೊನೆಯ ಬಾರಿ ಮೃತ ವೈದ್ಯೆ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವುದು” ಎಂದು ಬರೆದುಕೊಂಡಿದ್ದಾರೆ. ಜೊತೆ ಒರಿಜಿನಲ್ ವಿಡಿಯೋ ಸೃಷ್ಟಿಸಿರುವುದು ಝೀನತ್ ರಹ್ಮಾನ್ ಎಂದು ತಿಳಿಸಿದ್ದಾರೆ.

ಆಗಸ್ಟ್ 18,2024ರಂದು ಮುನ್ನಿ ಠಾಕೂರ್ ಎಂಬ ಫೇಸ್‌ಬುಕ್‌ ಬಳಕೆದಾರರು ವೈರಲ್ ವಿಡಿಯೋ ಪೋಸ್ಟ್ ಮಾಡಿದ್ದರು. ಅಲ್ಲೂ ಒರಿಜಿನಲ್ ವಿಡಿಯೋ ಸೃಷ್ಟಿಸಿದವರು ಝೀನತ್ ರಹ್ಮಾನ್ ಎಂದು ಬರೆದುಕೊಂಡಿದ್ದರು.

ಝೀನತ್ ರಹ್ಮಾನ್ ಎಂಬವರ ಬಗ್ಗೆ ಮಾಹಿತಿ ಹುಡುಕಿದಾಗ, ಅವರು ಕೋಲ್ಕತ್ತಾದ ಮೇಕಪ್ ಕಲಾವಿದೆಯಾಗಿದ್ದು, ಬಹಳ ಹಿಂದಿನಿಂದಲೂ ಅತ್ಯಾಚಾರದ ಕೃತ್ಯಗಳ ವಿರುದ್ದ ವಿಶಿಷ್ಟ ರೀತಿಯಲ್ಲಿ ತನ್ನ ಪ್ರತಿಭಟನೆ ವ್ಯಕ್ತಪಡಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ. ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಪರಿಶೀಲಿಸಿದಾಗ ಅನೇಕ ವಿಡಿಯೋಗಳು ಕಂಡು ಬಂದಿವೆ.

ಒಟ್ಟಿನಲ್ಲಿ, ಇತರ ಹಲವು ಅತ್ಯಾಚಾರ ಘಟನೆಗಳನ್ನು ವಿಶಿಷ್ಟ ರೀತಿಯಲ್ಲಿ ಖಂಡಿಸಿದಂತೆ ಆರ್‌ಜಿ ಕರ್ ಆಸ್ಪತ್ರೆಯ ಅತ್ಯಾಚಾರ ಘಟನೆಯನ್ನು ವಿಶಿಷ್ಟ ಮೇಕಪ್, ನಟನೆಯ ಮೂಲಕ ಕಲಾವಿದೆ ಝೀನತ್ ಖಂಡಿಸಿದ್ದಾರೆ. ಅದರ ವಿಡಿಯೋವನ್ನು ಕೆಲವರು ಆರ್‌ಜಿ ಕರ್ ಆಸ್ಪತ್ರೆಯ ಘಟನೆಯ ಸಂತ್ರಸ್ತೆಯ ನಿಜವಾದ ವಿಡಿಯೋ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ.

ಗಮನಿಸಿ : ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಕೋಲ್ಕತ್ತಾ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಫೋಟೋ ಮತ್ತು ಹೆಸರು ಇರುವುದರಿಂದ, ನಾವು ಅವುಗಳ ಸ್ಕ್ರೀನ್ ಶಾಟ್ ಮತ್ತು ಲಿಂಕ್ ಅನ್ನು ಸುದ್ದಿಯಲ್ಲಿ ಸೇರಿಸಿಲ್ಲ

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಯಾವತ್ತೂ ಹಿಂದೂ ದೇವರ ಪೋಟೋ ಪೋಸ್ಟ್ ಮಾಡಿಲ್ವಾ? ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...