Homeಫ್ಯಾಕ್ಟ್‌ಚೆಕ್Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

- Advertisement -
- Advertisement -

ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಆಯೋಜಿಸಿದ್ದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಮಾಡಿದ್ದು ಎನ್ನಲಾದ ಭಾಷಣದ ವಿಡಿಯೋವೊಂದು ವೈರಲ್ ಆಗಿದೆ.

ಹದಿನಾರು ನಿಮಿಷದ ವಿಡಿಯೋದಲ್ಲಿ “ನೀವು, ನನಗೆ ದೋಸೆ ಇಷ್ಟ ಎಂದು ಹೇಳುತ್ತೀರಿ. ಇಲ್ಲಿಗೆ ಬಂದು ತಮಿಳುನಾಡಿನ ಜನರಿಗೆ ನೀವು ದೋಸೆ ಇಷ್ಟಪಡುತ್ತೀರಿ ಎಂದು ಹೇಳುತ್ತೀರಿ. ಅದೇ ಸಮಯದಲ್ಲಿ, ನೀವೂ ದೋಸೆ ಇಷ್ಟಪಡುತ್ತೀರಿ ಎಂದು ಹೇಳುತ್ತೀರಿ. ನಿಮಗೆ ದೋಸೆ ಇಷ್ಟವಾಗಬಹುದು, ವಡೆ ಕೂಡ ಇಷ್ಟವಾಗಬಹುದು” ಎಂದು ರಾಹುಲ್ ಗಾಂಧಿ ಅಸ್ಪಷ್ಟವಾಗಿ ಹೇಳಿರುವುದು ಇದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿದ್ದು ಎನ್ನಲಾದ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವಿಡಿಯೋದಲ್ಲಿರುವ ‘ನ್ಯೂಸ್ 18 ತಮಿಳು’ ಲೋಗೋ ಗಮನಿಸಿದ ನಾವು ನ್ಯೂಸ್‌ 18 ತಮಿಳಿನ ಅಧಿಕೃತ ಯೂಟ್ಯೂಬ್ ಚಾನೆಲ್ ಪರಿಶೀಲಿಸಿದ್ದೇವೆ. ಈ ವೇಳೆ ಏಪ್ರಿಲ್ 12 ರಂದು ನೇರ ಪ್ರಸಾರ ಮಾಡಲಾದ ಮೂಲ ವಿಡಿಯೋ ನಮಗೆ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

‘ಕೊಯಮತ್ತೂರಿನಲ್ಲಿ ಒಂದೇ ವೇದಿಕೆಯಲ್ಲಿ ಎಂ.ಕೆ.ಸ್ಟಾಲಿನ್, ರಾಹುಲ್ ಗಾಂಧಿ ಚುನಾವಣಾ ಪ್ರಚಾರ | MK Stalin | Rahul’ ಎಂಬ ತಮಿಳು ಭಾಷೆಯ ಶೀರ್ಷಿಕೆಯ 11 ಗಂಟೆ 55 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 46 ನಿಮಿಷ 11 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಅಂಶಗಳಿವೆ.

“ನೀವು ಇಲ್ಲಿಗೆ ಬರ್ತೀರಿ ನನಗೆ ದೋಸೆ ಇಷ್ಟ ಎಂದು ಹೇಳುತ್ತೀರಿ. ನಂತರ ನೀವು ದೆಹಲಿಗೆ ಹೋಗಿ ಹೇಳುತ್ತೀರಿ ಒಂದು ದೇಶ, ಒಬ್ಬ ನಾಯಕ, ಒಂದು ಭಾಷೆ ಎಂದು ಹೇಳುತ್ತೀರಿ. ಒಂದು ಭಾಷೆ ಯಾಕೆ? ತಮಿಳಿಗೆ ಯಾಕೆ ಜಾಗವಿಲ್ಲ, ಬಂಗಾಳಿಗೆ ಯಾಕೆ ಜಾಗವಿಲ್ಲ, ಕನ್ನಡಕ್ಕೆ ಯಾಕೆ ಜಾಗವಿಲ್ಲ, ಮಣಿಪುರಿಗೆ ಯಾಕೆ ಜಾಗವಿಲ್ಲ? ನೀವು ಇಲ್ಲಿಗೆ ಬರುತ್ತೀರಿ ತಮಿಳು ನಾಡಿನ ಜನರಿಗೆ ಹೇಳುತ್ತೀರಿ ನೀವು ದೋಸೆ ಇಷ್ಟ ಪಡುತ್ತೀರಿ ಎಂದು, ನಂತರ ನೀವು ಅವರನ್ನು ಅವಮಾನಿಸುತ್ತೀರಿ. ಅವರ ಭಾಷೆ, ಸಂಸ್ಕೃತಿಯ ಮೇಲೆ ದಾಳಿ ಮಾಡುತ್ತೀರಿ. ನೀವು ದೋಸೆ ಇಷ್ಟ ಎನ್ನುತ್ತೀರಿ. ಆದರೆ, ತಮಿಳು ರೈತರು ಹಸಿವಿನಿಂದ ಬಳಲುತ್ತಿದ್ದಾರೆ, ತಮಿಳು ಯುವಕರು ನಿರುದ್ಯೋಗಿಗಳು. ನೀವು ನೋಟು ಅಮಾನ್ಯೀಕರಣ ಮತ್ತು ದೋಷಪೂರಿತ ಜಿಎಸ್‌ಟಿ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಯನ್ನು ನಾಶಪಡಿಸಿದ್ದೀರಿ. ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ತೆರಿಗೆ ಪಾವತಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ.

ನಾವು ಮೇಲೆ ಹೇಳಿದ ವಿಷಯಗಳನ್ನೊಳಗೊಂಡ ವಿಡಿಯೋವನ್ನು ಏಪ್ರಿಲ್ 12, 2024ರಂದು ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಅದರಲ್ಲೂ ರಾಹುಲ್ ಗಾಂಧಿ ದೋಸೆಯ ಉದಾಹರಣೆ ಕೊಟ್ಟು ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿರುವುದು ಇದೆ.

ನಾವು ನಡೆಸಿದ ಪರಿಶೀಲನೆಯಲ್ಲಿ, ರಾಹುಲ್ ಗಾಂಧಿ ಕೊಯಮತ್ತೂರಿನಲ್ಲಿ ನಡೆಸಿದ ಭಾಷಣದ ವಿಡಿಯೋವನ್ನು ಸಂಪೂರ್ಣವಾಗಿ ಎಡಿಟ್ ಮಾಡಿ ಅಸಂಬದ್ದ ಅರ್ಥ ಬರುವಂತೆ ತಿರುಚಿ ಹಂಚಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ : Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...