Homeಫ್ಯಾಕ್ಟ್‌ಚೆಕ್Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

Fact Check : ದೋಸೆ ಕುರಿತ ರಾಹುಲ್ ಗಾಂಧಿಯ ಭಾಷಣದ ವಿಡಿಯೋ ಎಡಿಟೆಡ್

- Advertisement -
- Advertisement -

ತಮಿಳುನಾಡಿನಲ್ಲಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಆಯೋಜಿಸಿದ್ದ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಮಾಡಿದ್ದು ಎನ್ನಲಾದ ಭಾಷಣದ ವಿಡಿಯೋವೊಂದು ವೈರಲ್ ಆಗಿದೆ.

ಹದಿನಾರು ನಿಮಿಷದ ವಿಡಿಯೋದಲ್ಲಿ “ನೀವು, ನನಗೆ ದೋಸೆ ಇಷ್ಟ ಎಂದು ಹೇಳುತ್ತೀರಿ. ಇಲ್ಲಿಗೆ ಬಂದು ತಮಿಳುನಾಡಿನ ಜನರಿಗೆ ನೀವು ದೋಸೆ ಇಷ್ಟಪಡುತ್ತೀರಿ ಎಂದು ಹೇಳುತ್ತೀರಿ. ಅದೇ ಸಮಯದಲ್ಲಿ, ನೀವೂ ದೋಸೆ ಇಷ್ಟಪಡುತ್ತೀರಿ ಎಂದು ಹೇಳುತ್ತೀರಿ. ನಿಮಗೆ ದೋಸೆ ಇಷ್ಟವಾಗಬಹುದು, ವಡೆ ಕೂಡ ಇಷ್ಟವಾಗಬಹುದು” ಎಂದು ರಾಹುಲ್ ಗಾಂಧಿ ಅಸ್ಪಷ್ಟವಾಗಿ ಹೇಳಿರುವುದು ಇದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಮಾತನಾಡಿದ್ದು ಎನ್ನಲಾದ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ. ವಿಡಿಯೋದಲ್ಲಿರುವ ‘ನ್ಯೂಸ್ 18 ತಮಿಳು’ ಲೋಗೋ ಗಮನಿಸಿದ ನಾವು ನ್ಯೂಸ್‌ 18 ತಮಿಳಿನ ಅಧಿಕೃತ ಯೂಟ್ಯೂಬ್ ಚಾನೆಲ್ ಪರಿಶೀಲಿಸಿದ್ದೇವೆ. ಈ ವೇಳೆ ಏಪ್ರಿಲ್ 12 ರಂದು ನೇರ ಪ್ರಸಾರ ಮಾಡಲಾದ ಮೂಲ ವಿಡಿಯೋ ನಮಗೆ ದೊರೆತಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

‘ಕೊಯಮತ್ತೂರಿನಲ್ಲಿ ಒಂದೇ ವೇದಿಕೆಯಲ್ಲಿ ಎಂ.ಕೆ.ಸ್ಟಾಲಿನ್, ರಾಹುಲ್ ಗಾಂಧಿ ಚುನಾವಣಾ ಪ್ರಚಾರ | MK Stalin | Rahul’ ಎಂಬ ತಮಿಳು ಭಾಷೆಯ ಶೀರ್ಷಿಕೆಯ 11 ಗಂಟೆ 55 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 46 ನಿಮಿಷ 11 ಸೆಕೆಂಡ್‌ನಿಂದ ವೈರಲ್ ಕ್ಲಿಪ್‌ನಲ್ಲಿರುವ ಅಂಶಗಳಿವೆ.

“ನೀವು ಇಲ್ಲಿಗೆ ಬರ್ತೀರಿ ನನಗೆ ದೋಸೆ ಇಷ್ಟ ಎಂದು ಹೇಳುತ್ತೀರಿ. ನಂತರ ನೀವು ದೆಹಲಿಗೆ ಹೋಗಿ ಹೇಳುತ್ತೀರಿ ಒಂದು ದೇಶ, ಒಬ್ಬ ನಾಯಕ, ಒಂದು ಭಾಷೆ ಎಂದು ಹೇಳುತ್ತೀರಿ. ಒಂದು ಭಾಷೆ ಯಾಕೆ? ತಮಿಳಿಗೆ ಯಾಕೆ ಜಾಗವಿಲ್ಲ, ಬಂಗಾಳಿಗೆ ಯಾಕೆ ಜಾಗವಿಲ್ಲ, ಕನ್ನಡಕ್ಕೆ ಯಾಕೆ ಜಾಗವಿಲ್ಲ, ಮಣಿಪುರಿಗೆ ಯಾಕೆ ಜಾಗವಿಲ್ಲ? ನೀವು ಇಲ್ಲಿಗೆ ಬರುತ್ತೀರಿ ತಮಿಳು ನಾಡಿನ ಜನರಿಗೆ ಹೇಳುತ್ತೀರಿ ನೀವು ದೋಸೆ ಇಷ್ಟ ಪಡುತ್ತೀರಿ ಎಂದು, ನಂತರ ನೀವು ಅವರನ್ನು ಅವಮಾನಿಸುತ್ತೀರಿ. ಅವರ ಭಾಷೆ, ಸಂಸ್ಕೃತಿಯ ಮೇಲೆ ದಾಳಿ ಮಾಡುತ್ತೀರಿ. ನೀವು ದೋಸೆ ಇಷ್ಟ ಎನ್ನುತ್ತೀರಿ. ಆದರೆ, ತಮಿಳು ರೈತರು ಹಸಿವಿನಿಂದ ಬಳಲುತ್ತಿದ್ದಾರೆ, ತಮಿಳು ಯುವಕರು ನಿರುದ್ಯೋಗಿಗಳು. ನೀವು ನೋಟು ಅಮಾನ್ಯೀಕರಣ ಮತ್ತು ದೋಷಪೂರಿತ ಜಿಎಸ್‌ಟಿ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಯನ್ನು ನಾಶಪಡಿಸಿದ್ದೀರಿ. ಭಾರತೀಯ ಇತಿಹಾಸದಲ್ಲಿ ಮೊದಲ ಬಾರಿಗೆ ರೈತರು ತೆರಿಗೆ ಪಾವತಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ್ದಾರೆ.

ನಾವು ಮೇಲೆ ಹೇಳಿದ ವಿಷಯಗಳನ್ನೊಳಗೊಂಡ ವಿಡಿಯೋವನ್ನು ಏಪ್ರಿಲ್ 12, 2024ರಂದು ಕಾಂಗ್ರೆಸ್‌ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಅದರಲ್ಲೂ ರಾಹುಲ್ ಗಾಂಧಿ ದೋಸೆಯ ಉದಾಹರಣೆ ಕೊಟ್ಟು ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸಿರುವುದು ಇದೆ.

ನಾವು ನಡೆಸಿದ ಪರಿಶೀಲನೆಯಲ್ಲಿ, ರಾಹುಲ್ ಗಾಂಧಿ ಕೊಯಮತ್ತೂರಿನಲ್ಲಿ ನಡೆಸಿದ ಭಾಷಣದ ವಿಡಿಯೋವನ್ನು ಸಂಪೂರ್ಣವಾಗಿ ಎಡಿಟ್ ಮಾಡಿ ಅಸಂಬದ್ದ ಅರ್ಥ ಬರುವಂತೆ ತಿರುಚಿ ಹಂಚಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ : Fact Check : ಇದು ಅಲ್ಲಾ vs ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...