Homeಫ್ಯಾಕ್ಟ್‌ಚೆಕ್FACT CHECK : ಗಾಂಧಿ ಕುಟುಂಬದ ಜೊತೆಗಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಸಿಬ್ಬಂದಿ...

FACT CHECK : ಗಾಂಧಿ ಕುಟುಂಬದ ಜೊತೆಗಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್‌ಎಫ್‌ ಸಿಬ್ಬಂದಿ ಅಲ್ಲ

- Advertisement -
- Advertisement -

ನಟಿ, ಸಂಸದೆ ಕಂಗನಾ ರಣಾವತ್‌ಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಆರೋಪ ಜೂನ್ 7, 2024ರಂದು ಕೇಳಿ ಬಂದಿತ್ತು.

ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಕಂಗನಾ ಜೂನ್ 4ರಂದು ಹೊರಬಿದ್ದ ಫಲಿತಾಂಶದಲ್ಲಿ ಜಯಗಳಿಸಿದ್ದರು. ಈ ಬೆನ್ನಲ್ಲೇ ಕಂಗನಾ ಮೇಲೆ ಕಪಾಳಮೋಕ್ಷ ನಡೆದಿದೆ ಎನ್ನುವುದು ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಸಿಐಎಸ್‌ಎಫ್‌ ಸಿಬ್ಬಂದಿಯ ಹೆಸರು ಕುಲ್ವಿಂದರ್ ಕೌರ್ ಎಂದು ತಿಳಿದು ಬಂದಿದೆ. ಈಕೆಯ ತಾಯಿಯೂ ಪಾಲ್ಗೊಂಡಿದ್ದ ರೈತ ಹೋರಾಟದ ಕುರಿತು ಕೀಳು ಮಟ್ಟದ ಹೇಳಿಕೆ ನೀಡಿದ್ದಕ್ಕೆ ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಪಾಳಮೋಕ್ಷ ಆರೋಪ ಕೇಳಿ ಬಂದ ಬಳಿಕ ಕುಲ್ವಿಂದರ್ ಕೌರ್ ಅವರನ್ನು ಖಲಿಸ್ತಾನಿ, ಭಯೋತ್ಪಾದಕಿ ಎಂದೆಲ್ಲ ಬಿಂಬಿಸುವ ಪ್ರಯತ್ನಗಳು ನಡೆದಿವೆ.

ಇತ್ತೀಚೆಗೆ ಗಾಂಧಿ ಕುಟುಂಬ (ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ)ದ ಜೊತೆ ಮಹಿಳೆಯೊಬ್ಬರು ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಆ ಮಹಿಳೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಎಂದು ಸುದ್ದಿ ಹಬ್ಬಿದೆ.

ಫ್ಯಾಕ್ಟ್‌ಚೆಕ್ : ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ ಕುಲ್ವಿಂದರ್ ಕೌರ್ ಗಾಂಧಿ ಕುಟುಂಬ ಆಪ್ತೆ ಎಂಬ ರೀತಿಯಲ್ಲಿ ಸುದ್ದಿ ಹಬ್ಬಿರುವ ಹಿನ್ನೆಲೆ, ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಕಂಗನಾಗೆ ಕಪಾಳಮೋಕ್ಷ ಮಾಡಿದ ಆರೋಪ ಕೇಳಿ ಬಂದಾಗ ವೈರಲ್ ಆದ ಕುಲ್ವಿಂದರ್ ಕೌರ್ ಅವರ ಫೋಟೋ ಮತ್ತು ಗಾಂಧಿ ಕುಟುಂಬದ ಜೊತೆ ನಿಂತಿರುವ ಮಹಿಳೆಯ ಫೋಟೋಗಳನ್ನು ನಾವು ಹೋಲಿಕೆ ಮಾಡಿ ನೋಡಿದ್ದು, ಎರಡೂ ಫೋಟೋಗಳ ನಡುವೆ ವ್ಯತ್ಯಾಸ ಕಂಡು ಬಂದಿದೆ.

ಗಾಂಧಿ ಕುಟುಂಬದ ಜೊತೆ ಮಹಿಳೆ ನಿಂತಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್‌ ಮಾಡಿ ನೋಡಿದಾಗ, “ಫೆಬ್ರವರಿ 14,2024 ರಂದು ಮಾಜಿ ಕಾಂಗ್ರೆಸ್ ಶಾಸಕಿ ದಿವ್ಯಾ ಮಹಿಪಾಲ್ ಮಡೆರ್ನಾ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಈ ಪೋಟೋ ಕಂಡು ಬಂದಿದೆ.

ಫೋಟೋದಲ್ಲಿ ಜೊತೆಗಿ ಬಂದಿರುವ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಸ್ವಾಗತಿಸಲಾಯಿತು ಎಂದು ಬರೆಯಲಾಗಿದೆ.

ಈ ಮೂಲಕ ಗಾಂಧಿ ಕುಟುಂಬದ ಜೊತೆಗೆ ನಿಂತಿರುವ ಮಹಿಳೆ ಕಂಗನಾಗೆ ಕಪಾಳಮೋಕ್ಷ ಮಾಡಿರುವ ಕುಲ್ವಿಂದರ್ ಕೌರ್ ಅಲ್ಲ, ಮಾಜಿ ಕಾಂಗ್ರೆಸ್ ಶಾಸಕಿ ದಿವ್ಯಾ ಮಹಿಪಾಲ್ ಮಡೆರ್ನಾ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಎಂದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ರಸ್ತೆ ಮಧ್ಯೆ ಯುವತಿಯನ್ನು ಗುಂಡಿಕ್ಕಿ ಕೊಂದಿರುವ ವಿಡಿಯೋ ಮಣಿಪುರದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...