Homeಫ್ಯಾಕ್ಟ್‌ಚೆಕ್FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

- Advertisement -
- Advertisement -

ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ನೇಣಿಗೇರಿಸಿರುವುದನ್ನು ನೋಡಬಹುದು.

ವಿಡಿಯೋ ಹಂಚಿಕೊಂಡಿರುವ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ರಾಜಸ್ಥಾನದಲ್ಲಿ ನಾರಾಯಣ ದಾಸ್ ಎಂಬ ದಲಿತ ಹುಡುಗನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೇಲ್ಜಾತಿಯ ದೇವಸ್ಥಾನದಲ್ಲಿನ ಪ್ರತಿಮೆಯನ್ನು ಅವಮಾನಿಸಿದ ಕಾರಣ ಯುವಕನನ್ನು ನೇಣಿಗೆ ಹಾಕಲಾಗಿದೆ ಎಂದಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕವಿತಾ ಯಾದವ್ ಎಂಬ ಬಳಕೆದಾರರು “ಹಿಂದೂ ತಾಲಿಬಾನ್ ಉಗ್ರಗಾಮಿ ಮನುವಾದಿಗಳು ದಲಿತ ಹುಡುಗನನ್ನು ನೇಣಿಗೇರಿಸಿದ್ದಾರೆ ಮತ್ತು ಲೈವ್ ವಿಡಿಯೋ ಮೂಲಕ ತೋರಿಸಿದ್ದಾರೆ. ಈ ಯುವಕ ಮೇಲ್ಜಾತಿಯ ದೇವಸ್ಥಾನದಲ್ಲಿನ ಪ್ರತಿಮೆಯನ್ನು ಅವಮಾನಿಸಿದ್ದಾನೆ ಎಂದು ಹೇಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಆರೋಪಗಳನ್ನು ಮಾಡಿ ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಿಜೆಪಿ ಕಾರ್ಯಕರ್ತನನ್ನು ನೇಣಿಗೆ ಹಾಕಲಾಗಿದೆ ಎಂದಿದ್ದಾರೆ.

ಮಧುಗಿರಿ ಮೋದಿ ಮೋದಿ ಯೋಗಿ ಭಕ್ತ ಎಂಬ ಎಕ್ಸ್ ಖಾತೆಯಲ್ಲಿ “ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ನೇಣಿಗೆ ಹಾಕಿದ ಘಟನೆ. ಮನೇಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ. ಜೂನ್ 4ರ ನಂತರ ನೋಡುತ್ತಿರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು” ಎಂದು ಬರೆದುಕೊಂಡು ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ಸರ್ಚ್‌ ಮಾಡಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ದೇಶದಲ್ಲಿ ಅಥವಾ ವಿದೇಶಗಳಲ್ಲಿ ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಯಾವುದೇ ಮಾಧ್ಯಮ ವರದಿಗಳು ನಮಗೆ ದೊರೆತಿಲ್ಲ.

ವಿಡಿಯೋ ಹಂಚಿಕೊಂಡಿರುವ ಅನೇಕ ಎಕ್ಸ್‌ ಬಳಕೆದಾರರು ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಆದರೆ, ರಾಜಸ್ಥಾನ ಪೊಲೀಸರು ಅಂತಹ ಘಟನೆ ರಾಜ್ಯದಲ್ಲಿ ನಡೆದಿಲ್ಲ ಎಂದು ಖಚಿತಪಡಿಸಿದ್ದಾರೆ.

ಏಪ್ರಿಲ್ 28ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಜಸ್ಥಾನ ಪೊಲೀಸರು, “ಈ ವಿಡಿಯೋ ಸಂಪೂರ್ಣ ನಕಲಿ, ಅಂತಹ ಯಾವುದೇ ಘಟನೆ ಇಲ್ಲಿ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇಂತಹ ವಿಡಿಯೋ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ಭಾರತ ಅಥವಾ ಹೊರ ದೇಶಗಳಲ್ಲಿ ಎಲ್ಲೂ ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿದ ಮಾಹಿತಿ ದೊರೆತಿಲ್ಲ. ರಾಜಸ್ಥಾನಲ್ಲಿ ಅಂತಹ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಈ ವಿಡಿಯೋ ಏನು? ಎಲ್ಲಿ ನಡೆದಿದೆ ಎಂಬುವುದ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ : FACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್ ಯುವ ಘಟಕ ಹೆಸರಿನ ಫೇಸ್‌ಬುಕ್ ಪೇಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...