Homeಫ್ಯಾಕ್ಟ್‌ಚೆಕ್FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

FACT CHECK : ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಇತ್ತೀಚಿನ ಯಾವುದೇ ವರದಿಗಳಿಲ್ಲ

- Advertisement -
- Advertisement -

ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ನೇಣಿಗೇರಿಸಿರುವುದನ್ನು ನೋಡಬಹುದು.

ವಿಡಿಯೋ ಹಂಚಿಕೊಂಡಿರುವ ಕೆಲ ಸಾಮಾಜಿಕ ಜಾಲತಾಣ ಬಳಕೆದಾರರು ರಾಜಸ್ಥಾನದಲ್ಲಿ ನಾರಾಯಣ ದಾಸ್ ಎಂಬ ದಲಿತ ಹುಡುಗನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಲಾಗಿದೆ ಎಂದಿದ್ದಾರೆ. ಇನ್ನೂ ಕೆಲವರು ಮೇಲ್ಜಾತಿಯ ದೇವಸ್ಥಾನದಲ್ಲಿನ ಪ್ರತಿಮೆಯನ್ನು ಅವಮಾನಿಸಿದ ಕಾರಣ ಯುವಕನನ್ನು ನೇಣಿಗೆ ಹಾಕಲಾಗಿದೆ ಎಂದಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕವಿತಾ ಯಾದವ್ ಎಂಬ ಬಳಕೆದಾರರು “ಹಿಂದೂ ತಾಲಿಬಾನ್ ಉಗ್ರಗಾಮಿ ಮನುವಾದಿಗಳು ದಲಿತ ಹುಡುಗನನ್ನು ನೇಣಿಗೇರಿಸಿದ್ದಾರೆ ಮತ್ತು ಲೈವ್ ವಿಡಿಯೋ ಮೂಲಕ ತೋರಿಸಿದ್ದಾರೆ. ಈ ಯುವಕ ಮೇಲ್ಜಾತಿಯ ದೇವಸ್ಥಾನದಲ್ಲಿನ ಪ್ರತಿಮೆಯನ್ನು ಅವಮಾನಿಸಿದ್ದಾನೆ ಎಂದು ಹೇಳಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಆರೋಪಗಳನ್ನು ಮಾಡಿ ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಆದರೆ, ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಿಜೆಪಿ ಕಾರ್ಯಕರ್ತನನ್ನು ನೇಣಿಗೆ ಹಾಕಲಾಗಿದೆ ಎಂದಿದ್ದಾರೆ.

ಮಧುಗಿರಿ ಮೋದಿ ಮೋದಿ ಯೋಗಿ ಭಕ್ತ ಎಂಬ ಎಕ್ಸ್ ಖಾತೆಯಲ್ಲಿ “ತಾಲಿಬಾನಿ ಐಸಿಸ್ ಶೈಲಿಯಲ್ಲಿ ಬಹಿರಂಗವಾಗಿ ಹಿಂದೂ ಬಿಜೆಪಿ ಕಾರ್ಯಕರ್ತನನ್ನು ನೇಣಿಗೆ ಹಾಕಿದ ಘಟನೆ. ಮನೇಲಿ ಕೂತಿರಿ, ಇಲ್ಲಿ ಸಹ ಅದೇ ಚಿತ್ರ ಪುನರಾವರ್ತನೆ ಆಗುತ್ತದೆ. ಜೂನ್ 4ರ ನಂತರ ನೋಡುತ್ತಿರಿ ಓಟಕ್ಕೆ ಮೈದಾನ ತಯಾರಾಗಿದ್ದನ್ನು” ಎಂದು ಬರೆದುಕೊಂಡು ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಗೂಗಲ್ ಸರ್ಚ್‌ ಮಾಡಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ದೇಶದಲ್ಲಿ ಅಥವಾ ವಿದೇಶಗಳಲ್ಲಿ ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿರುವ ಕುರಿತು ಯಾವುದೇ ಮಾಧ್ಯಮ ವರದಿಗಳು ನಮಗೆ ದೊರೆತಿಲ್ಲ.

ವಿಡಿಯೋ ಹಂಚಿಕೊಂಡಿರುವ ಅನೇಕ ಎಕ್ಸ್‌ ಬಳಕೆದಾರರು ಈ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ಹೇಳಿದ್ದಾರೆ. ಆದರೆ, ರಾಜಸ್ಥಾನ ಪೊಲೀಸರು ಅಂತಹ ಘಟನೆ ರಾಜ್ಯದಲ್ಲಿ ನಡೆದಿಲ್ಲ ಎಂದು ಖಚಿತಪಡಿಸಿದ್ದಾರೆ.

ಏಪ್ರಿಲ್ 28ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ರಾಜಸ್ಥಾನ ಪೊಲೀಸರು, “ಈ ವಿಡಿಯೋ ಸಂಪೂರ್ಣ ನಕಲಿ, ಅಂತಹ ಯಾವುದೇ ಘಟನೆ ಇಲ್ಲಿ ನಡೆದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಇಂತಹ ವಿಡಿಯೋ ಪೋಸ್ಟ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ಭಾರತ ಅಥವಾ ಹೊರ ದೇಶಗಳಲ್ಲಿ ಎಲ್ಲೂ ಯುವಕನನ್ನು ಸಾರ್ವಜನಿಕವಾಗಿ ನೇಣಿಗೆ ಹಾಕಿದ ಮಾಹಿತಿ ದೊರೆತಿಲ್ಲ. ರಾಜಸ್ಥಾನಲ್ಲಿ ಅಂತಹ ಘಟನೆ ನಡೆದಿಲ್ಲ ಎಂದು ಪೊಲೀಸರೇ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಈ ವಿಡಿಯೋ ಏನು? ಎಲ್ಲಿ ನಡೆದಿದೆ ಎಂಬುವುದ ಖಚಿತ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ : FACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್ ಯುವ ಘಟಕ ಹೆಸರಿನ ಫೇಸ್‌ಬುಕ್ ಪೇಜ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...