Homeಫ್ಯಾಕ್ಟ್‌ಚೆಕ್FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗ್ತಿದೆ ಎಂದು ಪ್ರತಿಪಾದಿಸಿ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

“ಎಂಥಾ ನಾಚಿಕೆಗೇಡು!! ನಮೋ ಮೇಲಿನ ಹೊಟ್ಟೆಕಿಚ್ಚಿಗೆ ಆಗ್ತಿದೆ ಹಲವು ರೈಲು ಅಪಘಾತಗಳು!? ಹೌದು, ಭಾರತದಲ್ಲಿ ಆಗಿರೋ ಹಲವು ರೈಲು ಅಪಘಾತಗಳಿಗೆ ಮನುಷ್ಯರೇ ಕಾರಣ ಎನ್ನಲಾಗ್ತಿದೆ. ಎಷ್ಟೋ ಕಡೆ ಬೇಕಂತಲೇ ಹಳಿಗಳ ಮೇಲೆ ಕಲ್ಲುಗಳನ್ನು ಇಡಲಾಗಿದೆ. ಕೆಲವೆಡೆ ಹಳಿಗಳ ಕೊಂಡಿಗಳನ್ನು ಮುರಿಯಲಾಗಿದೆ. ಇನ್ನೂ ಕೆಲವೆಡೆ ಸಿಗ್ನಲ್ ಕಾಣದಂತೆ ಲೈಟ್‌ಗಳಿಗೆ ಬಟ್ಟೆ ಮುಚ್ಚಲಾಗಿದೆ. ಇದು ಕಲ್ಪನೆ ಅಲ್ಲ, ನಿಜವಾಗಿಯೂ ನಡೆದಿರೋದು. ಹಾಗಿದ್ರೆ ಇದಕ್ಕೆಲ್ಲಾ ಯಾರು ಕಾರಣ?” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಪೋಸ್ಟರ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಹಾಕಿ ಇತ್ತೀಚೆಗೆ ನಡೆದ ಕಾಂಚನ್‌ಜುಂಗಾ ರೈಲು ಅಪಘಾತವನ್ನು ರಾಜಕೀಯ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರೇ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಇತ್ತೀಚೆಗೆ, ಕೆಲ ವ್ಯಕ್ತಿಗಳು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರ ಸ್ಕ್ರೀನ್ ಹಂಚಿಕೊಂಡಿರುವ ಕೆಲವರು, “ಮೋದಿ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಂಡೆಂಟ್ ಆಗುವಂತೆ ಮಾಡುವ ಕುತಂತ್ರ ಮಾಡಿದ್ದಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಇಲ್ಲ. ರಾಜಕೀಯ ದ್ವೇಷಕ್ಕೆ ರೈಲು ಅಪಘಾತ ನಡೆಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಪ್ರಾಥಮಿಕ ವರದಿಗಳು, ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಮಾನವ ದೋಷದ ಸಾಧ್ಯತೆಯನ್ನು ಸೂಚಿಸುತ್ತವೆ. ಆದರೆ, ರೈಲ್ವೆ ಸುರಕ್ಷತಾ ಆಯುಕ್ತರ ತನಿಖೆ ಪೂರ್ಣಗೊಂಡ ನಂತರವೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜಿಹಾದಿ ಮನಸ್ಥಿತಿಯವರು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟಿ ಅಪಘಾತ ಆಗುವಂತೆ ಮಾಡಿದ್ದಾರೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಾದಿಸಲಾಗಿದೆ. ಈ ಮೂಲಕ ಮುಸ್ಲಿಮರು ದುಷ್ಕೃತ್ಯವೆಸಗಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಯಾರು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಮುಸ್ಲಿಮರು ಈ ರೈಲ್ವೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಆದರೆ, ಈ ರೈಲು ಅಪಘಾತ ಸಂಭವಿಸಿದಾಗ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಬಿಟ್ಟು ಮುಸ್ಲಿಮರು ಜನರ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಮಾನವ ದೋಷಕ್ಕೆ ರೈಲು ಅಪಘಾತಗಳು ನಡೆದಿರುವ ಉದಾಹರಣೆಗಳಿವೆ. ಇನ್ನು ಜಿಹಾದಿ ಮನಸ್ಥಿತಿಯವರು ಸಿಗ್ನಲ್‌ಗೆ ಬಟ್ಟೆ ಕಟ್ಟಿ ರೈಲು ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬುವುದು ಆಧಾರ ರಹಿತವಾಗಿದೆ.

ಇದನ್ನೂ ಓದಿ : FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...