Homeಫ್ಯಾಕ್ಟ್‌ಚೆಕ್FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

FACT CHECK : ಮೋದಿ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗ್ತಿದೆ ಎಂಬುವುದಕ್ಕೆ ಆಧಾರವಿಲ್ಲ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗ್ತಿದೆ ಎಂದು ಪ್ರತಿಪಾದಿಸಿ ಪೋಸ್ಟರ್‌ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

“ಎಂಥಾ ನಾಚಿಕೆಗೇಡು!! ನಮೋ ಮೇಲಿನ ಹೊಟ್ಟೆಕಿಚ್ಚಿಗೆ ಆಗ್ತಿದೆ ಹಲವು ರೈಲು ಅಪಘಾತಗಳು!? ಹೌದು, ಭಾರತದಲ್ಲಿ ಆಗಿರೋ ಹಲವು ರೈಲು ಅಪಘಾತಗಳಿಗೆ ಮನುಷ್ಯರೇ ಕಾರಣ ಎನ್ನಲಾಗ್ತಿದೆ. ಎಷ್ಟೋ ಕಡೆ ಬೇಕಂತಲೇ ಹಳಿಗಳ ಮೇಲೆ ಕಲ್ಲುಗಳನ್ನು ಇಡಲಾಗಿದೆ. ಕೆಲವೆಡೆ ಹಳಿಗಳ ಕೊಂಡಿಗಳನ್ನು ಮುರಿಯಲಾಗಿದೆ. ಇನ್ನೂ ಕೆಲವೆಡೆ ಸಿಗ್ನಲ್ ಕಾಣದಂತೆ ಲೈಟ್‌ಗಳಿಗೆ ಬಟ್ಟೆ ಮುಚ್ಚಲಾಗಿದೆ. ಇದು ಕಲ್ಪನೆ ಅಲ್ಲ, ನಿಜವಾಗಿಯೂ ನಡೆದಿರೋದು. ಹಾಗಿದ್ರೆ ಇದಕ್ಕೆಲ್ಲಾ ಯಾರು ಕಾರಣ?” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಪೋಸ್ಟರ್‌ನಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ಹಾಕಿ ಇತ್ತೀಚೆಗೆ ನಡೆದ ಕಾಂಚನ್‌ಜುಂಗಾ ರೈಲು ಅಪಘಾತವನ್ನು ರಾಜಕೀಯ ಕಾರಣಕ್ಕೆ ಮಮತಾ ಬ್ಯಾನರ್ಜಿ ಅವರೇ ಮಾಡಿಸಿದ್ದಾರೆ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಇತ್ತೀಚೆಗೆ, ಕೆಲ ವ್ಯಕ್ತಿಗಳು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದರ ಸ್ಕ್ರೀನ್ ಹಂಚಿಕೊಂಡಿರುವ ಕೆಲವರು, “ಮೋದಿ ಸರ್ಕಾರಕ್ಕೆ ಕಪ್ಪು ಚುಕ್ಕೆ ತರಲು ಮುಂದಾಗಿರುವ ಈ ಜಿಹಾದಿ ಮನಸ್ಥಿತಿ ಯಾವ ಮಟ್ಟಕ್ಕೆ ತಲುಪಿದೆ ಎಂದರೆ, ರೈಲು ಸಿಗ್ನಲ್ ಕಾಣದಂತೆ ಮಾಡಿ ರೈಲುಗಳ ನಡುವೆ ಆಕ್ಸಿಂಡೆಂಟ್ ಆಗುವಂತೆ ಮಾಡುವ ಕುತಂತ್ರ ಮಾಡಿದ್ದಾರೆ” ಎಂದು ಬರೆಯಲಾಗಿದೆ.

ಫ್ಯಾಕ್ಟ್‌ಚೆಕ್ : ನರೇಂದ್ರ ಮೋದಿಯವರ ಮೇಲಿನ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ಮಾಡಿಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಇಲ್ಲ. ರಾಜಕೀಯ ದ್ವೇಷಕ್ಕೆ ರೈಲು ಅಪಘಾತ ನಡೆಸಿರುವ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಪ್ರಾಥಮಿಕ ವರದಿಗಳು, ಪಶ್ಚಿಮ ಬಂಗಾಳದಲ್ಲಿ ನಡೆದ ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಮಾನವ ದೋಷದ ಸಾಧ್ಯತೆಯನ್ನು ಸೂಚಿಸುತ್ತವೆ. ಆದರೆ, ರೈಲ್ವೆ ಸುರಕ್ಷತಾ ಆಯುಕ್ತರ ತನಿಖೆ ಪೂರ್ಣಗೊಂಡ ನಂತರವೇ ಅಪಘಾತಕ್ಕೆ ನಿಖರವಾದ ಕಾರಣ ತಿಳಿಯಲಿದೆ” ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಜಿಹಾದಿ ಮನಸ್ಥಿತಿಯವರು ರೈಲ್ವೆಯ ಸಿಗ್ನಲ್ ಲೈಟ್‌ಗೆ ಬಟ್ಟೆ ಕಟ್ಟಿ ಅಪಘಾತ ಆಗುವಂತೆ ಮಾಡಿದ್ದಾರೆ ಎಂದೂ ಸಾಮಾಜಿಕ ಜಾಲತಾಣದಲ್ಲಿ ಪ್ರತಿಪಾದಿಸಲಾಗಿದೆ. ಈ ಮೂಲಕ ಮುಸ್ಲಿಮರು ದುಷ್ಕೃತ್ಯವೆಸಗಿದ್ದಾರೆ ಎಂದು ಬಿಂಬಿಸಲಾಗಿದೆ.

ಆದರೆ, ಕಾಂಚನ್‌ಜುಂಗಾ ರೈಲು ಅಪಘಾತಕ್ಕೆ ಯಾರು ಕಾರಣ ಎಂಬುವುದು ಇನ್ನೂ ತಿಳಿದು ಬಂದಿಲ್ಲ. ಮುಸ್ಲಿಮರು ಈ ರೈಲ್ವೆ ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಯಾವುದೇ ಆಧಾರಗಳಿಲ್ಲ. ಆದರೆ, ಈ ರೈಲು ಅಪಘಾತ ಸಂಭವಿಸಿದಾಗ ಬಕ್ರೀದ್ ಹಬ್ಬದ ಸಂಭ್ರಮಾಚರಣೆ ಬಿಟ್ಟು ಮುಸ್ಲಿಮರು ಜನರ ರಕ್ಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ

ನಾವು ನಡೆಸಿದ ಪರಿಶೀಲನೆಯಲ್ಲಿ ರಾಜಕೀಯ ದ್ವೇಷಕ್ಕೆ ರೈಲು ಅಪಘಾತಗಳನ್ನು ನಡೆಸಲಾಗಿದೆ ಎಂಬುವುದಕ್ಕೆ ಯಾವುದೇ ಪುರಾವೆಗಳು ಸಿಕ್ಕಿಲ್ಲ. ಮಾನವ ದೋಷಕ್ಕೆ ರೈಲು ಅಪಘಾತಗಳು ನಡೆದಿರುವ ಉದಾಹರಣೆಗಳಿವೆ. ಇನ್ನು ಜಿಹಾದಿ ಮನಸ್ಥಿತಿಯವರು ಸಿಗ್ನಲ್‌ಗೆ ಬಟ್ಟೆ ಕಟ್ಟಿ ರೈಲು ಅಪಘಾತಕ್ಕೆ ಕಾರಣರಾಗಿದ್ದಾರೆ ಎಂಬುವುದು ಆಧಾರ ರಹಿತವಾಗಿದೆ.

ಇದನ್ನೂ ಓದಿ : FACT CHECK : ಚುನಾವಣೆ ಭರವಸೆಗಳಿಗೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಕ್ಷಮೆಯಾಚಿಸಿದ್ದಾರೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...