Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಮುಖ್ಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್, ಮೋದಿಯವರ ಬಹುದೊಡ್ಡ ಫೋಟೊದೊಂದಿಗೆ “ಭೂಮಿಯ ಕೊನೆಯ ಮತ್ತು ಉತ್ತಮ ಭರವಸೆ” ಎಂಬ ಶೀರ್ಷಿಕೆಯಲ್ಲಿ ಲೇಖನ ಪ್ರಕಟಿಸಿದೆ ಎಂದು ಸ್ಕ್ರೀನ್‌ ಶಾಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವಿಶ್ವದ ಅತ್ಯಂತ ಪ್ರೀತಿಯ ಮತ್ತು ಶಕ್ತಿಶಾಲಿ ನಾಯಕ ನಮ್ಮನ್ನು ಆಶೀರ್ವದಿಸಲು ಇಲ್ಲಿದ್ದಾರೆ” ಎಂಬ ಉಪಶೀರ್ಷಿಕೆಯೊಂದಿಗೆ ಮೋದಿಯವರು ಸಹಿ ಮಾಡುತ್ತಿರುವ ಫೋಟೊವುಳ್ಳ ನ್ಯೂಯಾರ್ಕ್ ಟೈಮ್ಸ್‌ನ ದಿನಾಂಕ 26 ಸೆಪ್ಟೆಂಬರ್ 2021ರ ಆವೃತ್ತಿ ಎಂದು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ.

ಈ ಸ್ಕ್ರೀನ್‌ ಶಾಟ್‌ ಅನ್ನು ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಕಾರ್ಯದರ್ಶಿ ರೋಹಿತ್ ಚಹಾಲ್ ಸೇರಿದಂತೆ ನೂರಾರು ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ, ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ. ವಾಟ್ಸಾಪ್‌ನಲ್ಲಿ ಅತಿ ಹೆಚ್ಚು ಫಾರ್ವಾಡ್ ಆಗಿದೆ.

ಫ್ಯಾಕ್ಟ್‌ ಚೆಕ್:

ಸೆಪ್ಟಂಬರ್ 26 ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಮುಖಪುಟದಲ್ಲಿ ನರೇಂದ್ರ ಮೋದಿ ಕುರಿತಾಗಿ ಯಾವುದೇ ಲೇಖನ ಪ್ರಕಟಿಸಿಲ್ಲ ಮತ್ತು ಅವರ ಫೋಟೊವನ್ನು ಸಹ ಪ್ರಕಟಿಸಿಲ್ಲ. ಈ ಮೇಲಿನ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಯಾರೂ ಪತ್ರಿಕೆಯ URL ವಿವರನ್ನು ಒದಗಿಸಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇದು ಎಡಿಟ್ ಮಾಡಿದ ಫೋಟೊ ಎಂಬುದನ್ನು ತೋರಿಸುತ್ತದೆ.

ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತಾವು ಇದನ್ನು ಪ್ರಕಟಿಸಿಲ್ಲ. ಇದು ಎಡಿಟ್ ಮಾಡಿದ ಫೋಟೊ ಎಂದು ಸ್ಪಷ್ಟೀಕರಣ ನೀಡಿದೆ.

ಸ್ಕ್ರೀನ್ ಶಾಟ್‌ನಲ್ಲಿರುವ ಹೆಡ್‌ಲೈನ್ ಫಾಂಟ್ ನ್ಯೂಯಾರ್ಕ್ ಟೈಮ್ಸ್ ನಿರಂತರವಾಗಿ ಬಳಸುವ ಫಾಂಟ್‌ಗಿಂತ ಭಿನ್ನವಾಗಿದೆ. ಅಲ್ಲದೇ ಪತ್ರಿಕೆಯ ದಿನಾಂಕ ಬರೆಯುವ ಸ್ಥಳದಲ್ಲಿ  26 September ಎಂದು ಬರೆಯುವ ಬದಲು 26 “Setpember” ಎಂದು ತಪ್ಪಾಗಿ ಬರೆಯಲಾಗಿದೆ. ಹಾಗಾಗಿ ಇದು ಎಡಿಟೆಡ್ ಫೋಟೊ ಎಂದು ತೀರ್ಮಾನಿಸಬಹುದು.

ನಕಲಿ ಮುಖಪುಟದಲ್ಲಿ ಬಳಸಿದ ಪಿಎಂ ಮೋದಿಯವರ ಚಿತ್ರವನ್ನು ಕಳೆದ ತಿಂಗಳು ಪ್ರಕಟಿಸಿದ Zee News ಪ್ರಕಟಿಸಿದ “ಕಡಲ ಭದ್ರತೆಯನ್ನು ಹೆಚ್ಚಿಸುವ ಕುರಿತು ಯುಎನ್‌ಎಸ್‌ಸಿ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪಿಎಂ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂಬ ಲೇಖನಯಿಂದ ತೆಗೆದುಕೊಂಡಿರುವಂತೆ ಕಾಣುತ್ತದೆ.

ಅಲ್ಲದೆ ಈ ಫೋಟೊ ಮಾರ್ಚ್‌ನಿಂದಲೇ ಅಂತರ್ಜಾಲದಲ್ಲಿದೆ. “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12, 2021 ರಂದು ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು” ಎಂಬ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ ಲೇಖನದಲ್ಲಿ ಇದೇ ಚಿತ್ರ ಹಾಕಲಾಗಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಹೊಗಳುವುದಕ್ಕಾಗಿಯೇ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಅವರ ಬಗ್ಗೆ ಬಹುದೊಡ್ಡ ಲೇಖನ ಬಂದಿದೆ ಎಂದು ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ನ್ಯೂಯಾರ್ಕ್ ಟೈಮ್ಸ್ ಅಂತಹ ಯಾವುದೇ ಲೇಖನ ಪ್ರಕಟಿಸಿಲ್ಲ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ ditanagara

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...