Homeಫ್ಯಾಕ್ಟ್‌ಚೆಕ್ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್ ಸಭೆ ಹಾಗೂ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಮುಖ್ಯ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್, ಮೋದಿಯವರ ಬಹುದೊಡ್ಡ ಫೋಟೊದೊಂದಿಗೆ “ಭೂಮಿಯ ಕೊನೆಯ ಮತ್ತು ಉತ್ತಮ ಭರವಸೆ” ಎಂಬ ಶೀರ್ಷಿಕೆಯಲ್ಲಿ ಲೇಖನ ಪ್ರಕಟಿಸಿದೆ ಎಂದು ಸ್ಕ್ರೀನ್‌ ಶಾಟ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ವಿಶ್ವದ ಅತ್ಯಂತ ಪ್ರೀತಿಯ ಮತ್ತು ಶಕ್ತಿಶಾಲಿ ನಾಯಕ ನಮ್ಮನ್ನು ಆಶೀರ್ವದಿಸಲು ಇಲ್ಲಿದ್ದಾರೆ” ಎಂಬ ಉಪಶೀರ್ಷಿಕೆಯೊಂದಿಗೆ ಮೋದಿಯವರು ಸಹಿ ಮಾಡುತ್ತಿರುವ ಫೋಟೊವುಳ್ಳ ನ್ಯೂಯಾರ್ಕ್ ಟೈಮ್ಸ್‌ನ ದಿನಾಂಕ 26 ಸೆಪ್ಟೆಂಬರ್ 2021ರ ಆವೃತ್ತಿ ಎಂದು ಎಲ್ಲೆಡೆ ಹಂಚಿಕೊಳ್ಳಲಾಗುತ್ತಿದೆ.

ಈ ಸ್ಕ್ರೀನ್‌ ಶಾಟ್‌ ಅನ್ನು ಬಿಜೆಪಿ ಯುವ ವಿಭಾಗದ ರಾಷ್ಟ್ರೀಯ ಕಾರ್ಯದರ್ಶಿ ರೋಹಿತ್ ಚಹಾಲ್ ಸೇರಿದಂತೆ ನೂರಾರು ಬಿಜೆಪಿ ನಾಯಕರು ಟ್ವಿಟರ್‌ನಲ್ಲಿ, ಫೇಸ್‌ಬುಕ್‌ನಲ್ಲಿ ಷೇರ್ ಮಾಡಿದ್ದಾರೆ. ವಾಟ್ಸಾಪ್‌ನಲ್ಲಿ ಅತಿ ಹೆಚ್ಚು ಫಾರ್ವಾಡ್ ಆಗಿದೆ.

ಫ್ಯಾಕ್ಟ್‌ ಚೆಕ್:

ಸೆಪ್ಟಂಬರ್ 26 ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಮುಖಪುಟದಲ್ಲಿ ನರೇಂದ್ರ ಮೋದಿ ಕುರಿತಾಗಿ ಯಾವುದೇ ಲೇಖನ ಪ್ರಕಟಿಸಿಲ್ಲ ಮತ್ತು ಅವರ ಫೋಟೊವನ್ನು ಸಹ ಪ್ರಕಟಿಸಿಲ್ಲ. ಈ ಮೇಲಿನ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಯಾರೂ ಪತ್ರಿಕೆಯ URL ವಿವರನ್ನು ಒದಗಿಸಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇದು ಎಡಿಟ್ ಮಾಡಿದ ಫೋಟೊ ಎಂಬುದನ್ನು ತೋರಿಸುತ್ತದೆ.

ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತಾವು ಇದನ್ನು ಪ್ರಕಟಿಸಿಲ್ಲ. ಇದು ಎಡಿಟ್ ಮಾಡಿದ ಫೋಟೊ ಎಂದು ಸ್ಪಷ್ಟೀಕರಣ ನೀಡಿದೆ.

ಸ್ಕ್ರೀನ್ ಶಾಟ್‌ನಲ್ಲಿರುವ ಹೆಡ್‌ಲೈನ್ ಫಾಂಟ್ ನ್ಯೂಯಾರ್ಕ್ ಟೈಮ್ಸ್ ನಿರಂತರವಾಗಿ ಬಳಸುವ ಫಾಂಟ್‌ಗಿಂತ ಭಿನ್ನವಾಗಿದೆ. ಅಲ್ಲದೇ ಪತ್ರಿಕೆಯ ದಿನಾಂಕ ಬರೆಯುವ ಸ್ಥಳದಲ್ಲಿ  26 September ಎಂದು ಬರೆಯುವ ಬದಲು 26 “Setpember” ಎಂದು ತಪ್ಪಾಗಿ ಬರೆಯಲಾಗಿದೆ. ಹಾಗಾಗಿ ಇದು ಎಡಿಟೆಡ್ ಫೋಟೊ ಎಂದು ತೀರ್ಮಾನಿಸಬಹುದು.

ನಕಲಿ ಮುಖಪುಟದಲ್ಲಿ ಬಳಸಿದ ಪಿಎಂ ಮೋದಿಯವರ ಚಿತ್ರವನ್ನು ಕಳೆದ ತಿಂಗಳು ಪ್ರಕಟಿಸಿದ Zee News ಪ್ರಕಟಿಸಿದ “ಕಡಲ ಭದ್ರತೆಯನ್ನು ಹೆಚ್ಚಿಸುವ ಕುರಿತು ಯುಎನ್‌ಎಸ್‌ಸಿ ಉನ್ನತ ಮಟ್ಟದ ಮುಕ್ತ ಚರ್ಚೆಗೆ ಪಿಎಂ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂಬ ಲೇಖನಯಿಂದ ತೆಗೆದುಕೊಂಡಿರುವಂತೆ ಕಾಣುತ್ತದೆ.

ಅಲ್ಲದೆ ಈ ಫೋಟೊ ಮಾರ್ಚ್‌ನಿಂದಲೇ ಅಂತರ್ಜಾಲದಲ್ಲಿದೆ. “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12, 2021 ರಂದು ಗುಜರಾತ್‌ನ ಅಹಮದಾಬಾದ್‌ನ ಸಬರಮತಿ ಆಶ್ರಮದಲ್ಲಿ ಸಂದರ್ಶಕರ ಪುಸ್ತಕಕ್ಕೆ ಸಹಿ ಹಾಕಿದರು” ಎಂಬ ಪ್ರೆಸ್ ಇನ್ಫರ್ಮೇಶನ್ ಬ್ಯೂರೋದ ಲೇಖನದಲ್ಲಿ ಇದೇ ಚಿತ್ರ ಹಾಕಲಾಗಿದೆ.

ಒಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಹೊಗಳುವುದಕ್ಕಾಗಿಯೇ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಅವರ ಬಗ್ಗೆ ಬಹುದೊಡ್ಡ ಲೇಖನ ಬಂದಿದೆ ಎಂದು ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ. ವಾಸ್ತವದಲ್ಲಿ ನ್ಯೂಯಾರ್ಕ್ ಟೈಮ್ಸ್ ಅಂತಹ ಯಾವುದೇ ಲೇಖನ ಪ್ರಕಟಿಸಿಲ್ಲ.


ಇದನ್ನೂ ಓದಿ: ತಾಲಿಬಾನ್ ಪರ ಪಾಕ್‌ ಆರ್ಮಿ ದಾಳಿ ಎಂದು ವಿಡಿಯೊ ಗೇಮ್‌ ಕ್ಲಿಪ್‌ ಪ್ರಸಾರ ಮಾಡಿದ ರಿಪಬ್ಲಿಕ್ ಟಿವಿ ditanagara

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...