Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...