Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....