Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...