Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...