Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...