Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

ಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

- Advertisement -
- Advertisement -

ಲಾಕ್‌ಡೌನ್‌ ಹಂತ ಹಂತವಾಗಿ ತೆರವುಗೊಳ್ಳುತ್ತಿದೆ. ಈ ನಡುವೆ ಎಲ್ಲೆಡೆ ಸಣ್ಣ ಪ್ರಮಾಣದಲ್ಲಿ ಸಾರಿಗೆ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಈ ನಡುವೆ ಬಸ್‌ ಒಂದಕ್ಕೆ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸರಿಯಾಗಿ ಮಾಸ್ಕ್‌ ಹಾಕಿಕೊಳ್ಳದೆ ಮುಗಿಬಿದ್ದು ಹತ್ತುವ ವಿಡಿಯೋವೊಂದು ವೈರಲ್‌ ಆಗಿದೆ.

ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಂಸದ ಮಿಲಿಂದ್‌ ದೊಹ್ರರವರು ಈ ವಿಡಿಯೋವನ್ನು ಮುಂಬೈನಲ್ಲಿ ನಡೆದಿರುವುದು ಎದು ಟ್ವೀಟ್‌ ಮಾಡಿದ್ದು, ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಟ್ಯಾಗ್‌ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈನ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವಾಹನ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ನಂತರ ಅದನ್ನು ಡಿಲೀಟ್‌ ಮಾಡಿದ್ದಾರೆ. ಆರ್ಕೈವ್‌ಗಾಗಿ ಇಲ್ಲಿ ನೋಡಿ.

ಇದೇ ರೀತಿ ನೂರಾರು ಜನರು ಮುಂಬೈನಲ್ಲಿ ನಡೆದ ಘಟನೆ ಎಂದು ಈ ವಿಡಿಯೋವನ್ನು ಷೇರ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌: 

ವಿಡಿಯೋದ ಹಿನ್ನೆಲೆ ಆಡಿಯೋದಲ್ಲಿ ಕೇಳಿಬರುವ ಕಂಡಕ್ಟರ್‌ರವರ ಮಾತುಗಳು ಇದು ಮುಂಬೈದಲ್ಲ ಎಂದು ಸ್ಪಷ್ಟಪಡಿಸುತ್ತವೆ. ಕಂಡಕ್ಕರ್‌ ಹಲವು ಬಾರಿ ಬಂಗಾಳಿ ಭಾಷೆಯಲ್ಲಿ ನಿಧಾನ ನಿಧಾನ ಎಂದು ಹೇಳುವುದು ವಿಡಿಯೋದಲ್ಲಿ ಕೇಳಿಬರುತ್ತದೆ. ಅಲ್ಲದೇ ಎಲ್ಲರೂ ಬಂಗಾಳಿ ಭಾಷೆಯಲ್ಲಿ ಮಾತನಾಡಿರುವುದು ವಿಡಿಯೋದಲ್ಲಿ ಸಿಗುತ್ತದೆ.

ಟ್ವಿಟರ್ ಹ್ಯಾಂಡಲ್ @nv3sh ಅನ್ವೇಶ್‌ ಎಂಬುವವರು ಈ ವೀಡಿಯೊವನ್ನು ಮೊದಲು ಟ್ವೀಟ್‌ ಮಾಡಿದ್ದಾರೆ. “ಜೂನ್ 8, 2020 ರಂದು ಕೋಲ್ಕತ್ತಾದ ಬಸ್‌ನ ಪರಿಸ್ಥಿತಿಯನ್ನು ನೀವೇ ನೋಡಿ. ಸ್ನೇಹಿತರ ವೀಡಿಯೊ” ಎಂದು ಅವರು ಬರೆದಿದ್ದಾರೆ.

ಅಲ್ಲದೇ ಅನ್ವೇಶ್‌ರವರ್‌ ಅದಕ್ಕೂ ಮೊದಲು ಅದೇ ಬಸ್‌ನ ಮತ್ತೊಂದು ವಿಡಿಯೋವನ್ನು ಟ್ವೀಟ್‌ ಮಾಡಿದ್ದಾರೆ. ಅದರಲ್ಲಿ ಬಸ್‌ನ ಬಾಗಿಲಿನ್ನು ತೆರೆಯದ ಕಾರಣ ಹೊರಗೆ ಪ್ರಯಾಣಿಕರು ನೂಕುನುಗ್ಗಲು ಮಾಡುತ್ತಿರುವುದು ಕಾಣುತ್ತದೆ. ಆ ವಿಡಿಯೋದ 17ನೇ ಸೆಕೆಂಡ್‌ನಲ್ಲಿ ಕಂಡಕ್ಟರ್‌ “ಟೈಟಗರ್‌, ಪೊಲೀಸ್‌ ಸ್ಟೇಷನ್‌ಗೆ ಬಸ್‌ ಹೋಗುತ್ತದೆ” ಎಂದು ಕೂಗುವುದು ಕೇಳುತ್ತದೆ. ಟೈಟಗರ್‌ ಎಂಬುದು ಉತ್ತರ 24 ಪರಗಣ ಜಿಲ್ಲೆಗೆ ಬರಲಿದ್ದು ಕೋಲ್ಕತ್ತಾ ನಗರಕ್ಕೆ ಹತ್ತಿರವಿದೆ.

ಅಲ್ಲಿಗೆ ಈ ವಿಡಿಯೋ ಪಶ್ಚಿಮ ಬಂಗಾಳಕ್ಕೆ ಸೇರಿದ್ದೆ ಹೊರತು ಮುಂಬೈಗೆ ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....