Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

ಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

- Advertisement -
- Advertisement -

ಲಾಕ್‌ಡೌನ್‌ ಹಂತ ಹಂತವಾಗಿ ತೆರವುಗೊಳ್ಳುತ್ತಿದೆ. ಈ ನಡುವೆ ಎಲ್ಲೆಡೆ ಸಣ್ಣ ಪ್ರಮಾಣದಲ್ಲಿ ಸಾರಿಗೆ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಈ ನಡುವೆ ಬಸ್‌ ಒಂದಕ್ಕೆ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸರಿಯಾಗಿ ಮಾಸ್ಕ್‌ ಹಾಕಿಕೊಳ್ಳದೆ ಮುಗಿಬಿದ್ದು ಹತ್ತುವ ವಿಡಿಯೋವೊಂದು ವೈರಲ್‌ ಆಗಿದೆ.

ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಂಸದ ಮಿಲಿಂದ್‌ ದೊಹ್ರರವರು ಈ ವಿಡಿಯೋವನ್ನು ಮುಂಬೈನಲ್ಲಿ ನಡೆದಿರುವುದು ಎದು ಟ್ವೀಟ್‌ ಮಾಡಿದ್ದು, ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಟ್ಯಾಗ್‌ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈನ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವಾಹನ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ನಂತರ ಅದನ್ನು ಡಿಲೀಟ್‌ ಮಾಡಿದ್ದಾರೆ. ಆರ್ಕೈವ್‌ಗಾಗಿ ಇಲ್ಲಿ ನೋಡಿ.

ಇದೇ ರೀತಿ ನೂರಾರು ಜನರು ಮುಂಬೈನಲ್ಲಿ ನಡೆದ ಘಟನೆ ಎಂದು ಈ ವಿಡಿಯೋವನ್ನು ಷೇರ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌: 

ವಿಡಿಯೋದ ಹಿನ್ನೆಲೆ ಆಡಿಯೋದಲ್ಲಿ ಕೇಳಿಬರುವ ಕಂಡಕ್ಟರ್‌ರವರ ಮಾತುಗಳು ಇದು ಮುಂಬೈದಲ್ಲ ಎಂದು ಸ್ಪಷ್ಟಪಡಿಸುತ್ತವೆ. ಕಂಡಕ್ಕರ್‌ ಹಲವು ಬಾರಿ ಬಂಗಾಳಿ ಭಾಷೆಯಲ್ಲಿ ನಿಧಾನ ನಿಧಾನ ಎಂದು ಹೇಳುವುದು ವಿಡಿಯೋದಲ್ಲಿ ಕೇಳಿಬರುತ್ತದೆ. ಅಲ್ಲದೇ ಎಲ್ಲರೂ ಬಂಗಾಳಿ ಭಾಷೆಯಲ್ಲಿ ಮಾತನಾಡಿರುವುದು ವಿಡಿಯೋದಲ್ಲಿ ಸಿಗುತ್ತದೆ.

ಟ್ವಿಟರ್ ಹ್ಯಾಂಡಲ್ @nv3sh ಅನ್ವೇಶ್‌ ಎಂಬುವವರು ಈ ವೀಡಿಯೊವನ್ನು ಮೊದಲು ಟ್ವೀಟ್‌ ಮಾಡಿದ್ದಾರೆ. “ಜೂನ್ 8, 2020 ರಂದು ಕೋಲ್ಕತ್ತಾದ ಬಸ್‌ನ ಪರಿಸ್ಥಿತಿಯನ್ನು ನೀವೇ ನೋಡಿ. ಸ್ನೇಹಿತರ ವೀಡಿಯೊ” ಎಂದು ಅವರು ಬರೆದಿದ್ದಾರೆ.

ಅಲ್ಲದೇ ಅನ್ವೇಶ್‌ರವರ್‌ ಅದಕ್ಕೂ ಮೊದಲು ಅದೇ ಬಸ್‌ನ ಮತ್ತೊಂದು ವಿಡಿಯೋವನ್ನು ಟ್ವೀಟ್‌ ಮಾಡಿದ್ದಾರೆ. ಅದರಲ್ಲಿ ಬಸ್‌ನ ಬಾಗಿಲಿನ್ನು ತೆರೆಯದ ಕಾರಣ ಹೊರಗೆ ಪ್ರಯಾಣಿಕರು ನೂಕುನುಗ್ಗಲು ಮಾಡುತ್ತಿರುವುದು ಕಾಣುತ್ತದೆ. ಆ ವಿಡಿಯೋದ 17ನೇ ಸೆಕೆಂಡ್‌ನಲ್ಲಿ ಕಂಡಕ್ಟರ್‌ “ಟೈಟಗರ್‌, ಪೊಲೀಸ್‌ ಸ್ಟೇಷನ್‌ಗೆ ಬಸ್‌ ಹೋಗುತ್ತದೆ” ಎಂದು ಕೂಗುವುದು ಕೇಳುತ್ತದೆ. ಟೈಟಗರ್‌ ಎಂಬುದು ಉತ್ತರ 24 ಪರಗಣ ಜಿಲ್ಲೆಗೆ ಬರಲಿದ್ದು ಕೋಲ್ಕತ್ತಾ ನಗರಕ್ಕೆ ಹತ್ತಿರವಿದೆ.

ಅಲ್ಲಿಗೆ ಈ ವಿಡಿಯೋ ಪಶ್ಚಿಮ ಬಂಗಾಳಕ್ಕೆ ಸೇರಿದ್ದೆ ಹೊರತು ಮುಂಬೈಗೆ ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...