Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

ಫ್ಯಾಕ್ಟ್‌ಚೆಕ್: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು

- Advertisement -
- Advertisement -

ಲಾಕ್‌ಡೌನ್‌ ಹಂತ ಹಂತವಾಗಿ ತೆರವುಗೊಳ್ಳುತ್ತಿದೆ. ಈ ನಡುವೆ ಎಲ್ಲೆಡೆ ಸಣ್ಣ ಪ್ರಮಾಣದಲ್ಲಿ ಸಾರಿಗೆ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಈ ನಡುವೆ ಬಸ್‌ ಒಂದಕ್ಕೆ ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಸರಿಯಾಗಿ ಮಾಸ್ಕ್‌ ಹಾಕಿಕೊಳ್ಳದೆ ಮುಗಿಬಿದ್ದು ಹತ್ತುವ ವಿಡಿಯೋವೊಂದು ವೈರಲ್‌ ಆಗಿದೆ.

ಕಾಂಗ್ರೆಸ್‌ ಮುಖಂಡ ಮತ್ತು ಮಾಜಿ ಸಂಸದ ಮಿಲಿಂದ್‌ ದೊಹ್ರರವರು ಈ ವಿಡಿಯೋವನ್ನು ಮುಂಬೈನಲ್ಲಿ ನಡೆದಿರುವುದು ಎದು ಟ್ವೀಟ್‌ ಮಾಡಿದ್ದು, ಮುಂಬೈ ಮಹಾನಗರ ಸಾರಿಗೆ ಸಂಸ್ಥೆಗೆ ಟ್ಯಾಗ್‌ ಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈನ ಖಾಸಗಿ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ವಾಹನ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ನಂತರ ಅದನ್ನು ಡಿಲೀಟ್‌ ಮಾಡಿದ್ದಾರೆ. ಆರ್ಕೈವ್‌ಗಾಗಿ ಇಲ್ಲಿ ನೋಡಿ.

ಇದೇ ರೀತಿ ನೂರಾರು ಜನರು ಮುಂಬೈನಲ್ಲಿ ನಡೆದ ಘಟನೆ ಎಂದು ಈ ವಿಡಿಯೋವನ್ನು ಷೇರ್‌ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್‌: 

ವಿಡಿಯೋದ ಹಿನ್ನೆಲೆ ಆಡಿಯೋದಲ್ಲಿ ಕೇಳಿಬರುವ ಕಂಡಕ್ಟರ್‌ರವರ ಮಾತುಗಳು ಇದು ಮುಂಬೈದಲ್ಲ ಎಂದು ಸ್ಪಷ್ಟಪಡಿಸುತ್ತವೆ. ಕಂಡಕ್ಕರ್‌ ಹಲವು ಬಾರಿ ಬಂಗಾಳಿ ಭಾಷೆಯಲ್ಲಿ ನಿಧಾನ ನಿಧಾನ ಎಂದು ಹೇಳುವುದು ವಿಡಿಯೋದಲ್ಲಿ ಕೇಳಿಬರುತ್ತದೆ. ಅಲ್ಲದೇ ಎಲ್ಲರೂ ಬಂಗಾಳಿ ಭಾಷೆಯಲ್ಲಿ ಮಾತನಾಡಿರುವುದು ವಿಡಿಯೋದಲ್ಲಿ ಸಿಗುತ್ತದೆ.

ಟ್ವಿಟರ್ ಹ್ಯಾಂಡಲ್ @nv3sh ಅನ್ವೇಶ್‌ ಎಂಬುವವರು ಈ ವೀಡಿಯೊವನ್ನು ಮೊದಲು ಟ್ವೀಟ್‌ ಮಾಡಿದ್ದಾರೆ. “ಜೂನ್ 8, 2020 ರಂದು ಕೋಲ್ಕತ್ತಾದ ಬಸ್‌ನ ಪರಿಸ್ಥಿತಿಯನ್ನು ನೀವೇ ನೋಡಿ. ಸ್ನೇಹಿತರ ವೀಡಿಯೊ” ಎಂದು ಅವರು ಬರೆದಿದ್ದಾರೆ.

ಅಲ್ಲದೇ ಅನ್ವೇಶ್‌ರವರ್‌ ಅದಕ್ಕೂ ಮೊದಲು ಅದೇ ಬಸ್‌ನ ಮತ್ತೊಂದು ವಿಡಿಯೋವನ್ನು ಟ್ವೀಟ್‌ ಮಾಡಿದ್ದಾರೆ. ಅದರಲ್ಲಿ ಬಸ್‌ನ ಬಾಗಿಲಿನ್ನು ತೆರೆಯದ ಕಾರಣ ಹೊರಗೆ ಪ್ರಯಾಣಿಕರು ನೂಕುನುಗ್ಗಲು ಮಾಡುತ್ತಿರುವುದು ಕಾಣುತ್ತದೆ. ಆ ವಿಡಿಯೋದ 17ನೇ ಸೆಕೆಂಡ್‌ನಲ್ಲಿ ಕಂಡಕ್ಟರ್‌ “ಟೈಟಗರ್‌, ಪೊಲೀಸ್‌ ಸ್ಟೇಷನ್‌ಗೆ ಬಸ್‌ ಹೋಗುತ್ತದೆ” ಎಂದು ಕೂಗುವುದು ಕೇಳುತ್ತದೆ. ಟೈಟಗರ್‌ ಎಂಬುದು ಉತ್ತರ 24 ಪರಗಣ ಜಿಲ್ಲೆಗೆ ಬರಲಿದ್ದು ಕೋಲ್ಕತ್ತಾ ನಗರಕ್ಕೆ ಹತ್ತಿರವಿದೆ.

ಅಲ್ಲಿಗೆ ಈ ವಿಡಿಯೋ ಪಶ್ಚಿಮ ಬಂಗಾಳಕ್ಕೆ ಸೇರಿದ್ದೆ ಹೊರತು ಮುಂಬೈಗೆ ಅಲ್ಲ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿ: ಶ್ರಮಿಕ್ ರೈಲುಗಳಲ್ಲಿ ವಲಸೆ ಕಾರ್ಮಿಕರ ಸಾವು: ಫ್ಯಾಕ್ಟ್‌ಚೆಕ್ ಮಾಡುವ ಪಿಐಬಿ ಸತ್ಯ ಮರೆಮಾಚಿತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...