Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ ಚಿತ್ರಗಳನ್ನು ಒಳಗೊಂಡ ಕೊಲಾಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಅದೇ ಪ್ರಕರಣದ ಆರೋಪಿಯ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ ಅವರಿಗೆ ಟಿಎಂಸಿ ರಾಜ್ಯಸಭಾ ಸದಸ್ಯತ್ವ ನೀಡಿದೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತಜಿಂದರ್ ಬಗ್ಗಾ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಮತ್ತು ಬಿಜೆಪಿ ಬೆಂಬಲಿತ ಸಾಮಾಜಿಕ ಜಾಲತಾಣ ಇನ್ಫ್ಲುಯೆನ್ಸರ್‌ಗಳು ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ವೈರಲ್ ಆಗಿರುವ ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಫಾಲೋ ಮಾಡುತ್ತಿರುವ ಅರ್ಪಿತಾ ಚಟರ್ಜಿ ಎಂಬ ಬಿಜೆಪಿ ಬೆಂಬಲಿಗರು ಮತ್ತು ಇನ್ಫ್ಲುಯೆನ್ಸರ್‌ ಕೂಡ ಈ ಚಿತ್ರವನ್ನು ಹಂಚಿಕೊಂಡಿದ್ದು, “ಇದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ರಾಜಕಾರಣದ ಬಗ್ಗೆ ಎಲ್ಲವನ್ನೂ ತಿಳಿಸುತ್ತದೆ” ಎಂಬ ಒಕ್ಕಣೆಯೊಂದಿಗೆ ಈ ತಪ್ಪು ಮಾಹಿತಿಯನ್ನು ಹರಡಲು ಸಹಾಯ ಮಾಡಿದ್ದಾರೆ.

ಬಿಜೆಪಿ ಬೆಂಬಲಿತ ಇನ್ನೂ ಅನೇಕ ನಾಯಕರು ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿಗಳು ಈ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅದನ್ನು ಮತ್ತಷ್ಟು ಪಸರಿಸಿದ್ದಾರೆ. ಈ ಪೋಸ್ಟ್‌ಗಳು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ನೋಡಬಹುದು 1, 2, 3

ಫ್ಯಾಕ್ಟ್‌ಚೆಕ್‌ : ಮೇನಕಾ ಗುರುಸ್ವಾಮಿ ಅವರು ಸುಪ್ರೀಂ ಕೋರ್ಟ್ ಮುಂದೆ ಪಶ್ಚಿಮ ಬಂಗಾಳ ಸರ್ಕಾರದ ವಕೀಲರಾಗಿ ಹಾಜರಾಗಿದ್ದರು, ಆರೋಪಿಯ ಪರವಾಗಿ ಅಲ್ಲ ಎಂದು ಖ್ಯಾತ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ ಆಲ್ಟ್ ನ್ಯೂಸ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಅಬ್ಸರ್ವರ್ (Supreme Court Observer) ವರದಿ ಮಾಡಿರುವಂತೆ, ಅರ್‌ಜಿ ಕರ್‌ ಪ್ರಕರಣದಲ್ಲಿ  ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಮೇನಕಾ ಗುರುಸ್ವಾಮಿ ಸೇರಿದಂತೆ ಇತರರು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಮತ್ತು ಅವರ ತಂಡವು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ಪ್ರತಿನಿಧಿಸಿತ್ತು.

ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ತನ್ನನ್ನು ಸಮರ್ಥಿಸಿಕೊಳ್ಳಲು ಪಶ್ಚಿಮ ಬಂಗಾಳ ಸರ್ಕಾರವು ಅತಿಯಾದ ಕಾನೂನು ಯಂತ್ರವನ್ನು ಬಳಸುತ್ತಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೇನಕಾ ಗುರುಸ್ವಾಮಿ ಅವರು ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತೊಂದೆಡೆ, ಆರೋಪಿ ಸಂಜಯ್ ರಾಯ್‌ನ ವಿಚಾರಣೆ ನಡೆದ ಸೀಲ್ದಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ, ಸೌರವ್ ಬಂಡೋಪಾಧ್ಯಾಯ, ಸುಬ್ರತಾ ಕುಮಾರ್ ಗಿರಿ, ಕವಿತಾ ಸರ್ಕಾರ್ ಮತ್ತು ಸಂಜುತಿ ಚಕ್ರವರ್ತಿ ಸೇರಿದಂತೆ ಕಾನೂನು ನೆರವು ರಕ್ಷಣಾ ಮಂಡಳಿಯ (ಎಲ್‌ಎಡಿಸಿ) ವಕೀಲರ ತಂಡವು ಆತನನ್ನು ಪ್ರತಿನಿಧಿಸಿತ್ತು. ಆರೋಪಿಯು ಯಾವುದೇ ವಕೀಲರನ್ನು ಹೊಂದಿಲ್ಲದ ಸಂದರ್ಭದಲ್ಲಿ ಎಲ್‌ಎಡಿಸಿ ಕಾರ್ಯರೂಪಕ್ಕೆ ಬರುತ್ತದೆ. ಸಂವಿಧಾನದ 39ಎ ವಿಧಿಯ ಅಡಿಯಲ್ಲಿ ಸೀಲ್ದಾ ನ್ಯಾಯಾಲಯವು ಈ ಎಲ್‌ಎಡಿಸಿ ವಕೀಲರನ್ನು ನೇಮಿಸಿತ್ತು. ಈ ವಿಧಿಯು ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ಶಕ್ತಿಯಿಲ್ಲದವರಿಗೆ ಅಥವಾ ವಕೀಲರು ಸ್ವಯಂಪ್ರೇರಿತರಾಗಿ ಯಾರ ಪರ ವಾದಿಸಲು ಸಿದ್ಧರಿಲ್ಲದ ಅಂತಹ ಪ್ರಕರಣಗಳಲ್ಲಿ ಉಚಿತ ಕಾನೂನು ನೆರವು ನೀಡುವುದನ್ನು ಖಾತರಿಪಡಿಸುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸುಪ್ರೀಂ ಕೋರ್ಟ್ ವಕೀಲೆ ಮತ್ತು ಈಗ ತೃಣಮೂಲ ಕಾಂಗ್ರೆಸ್ ಸಂಸದೆಯಾಗಿರುವ ಮೇನಕಾ ಗುರುಸ್ವಾಮಿ ಅವರು ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯ ಪರವಾಗಿ ವಾದ ಮಂಡಿಸಿಲ್ಲ. ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಪರ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. 21 ವಕೀಲರ ತಂಡದಲ್ಲಿ ಈಕೆ ಕೂಡ ಒಬ್ಬರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....