Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ ಚಿತ್ರಗಳನ್ನು ಒಳಗೊಂಡ ಕೊಲಾಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಗೆ ಬಿಜೆಪಿ ಟಿಕೆಟ್ ನೀಡಿದ್ದರೆ, ಅದೇ ಪ್ರಕರಣದ ಆರೋಪಿಯ ಪರವಾಗಿ ವಾದ ಮಂಡಿಸಿದ ವಕೀಲೆ ಮೇನಕಾ ಗುರುಸ್ವಾಮಿ ಅವರಿಗೆ ಟಿಎಂಸಿ ರಾಜ್ಯಸಭಾ ಸದಸ್ಯತ್ವ ನೀಡಿದೆ ಎಂದು ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಲಾಗಿದೆ.

ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯದರ್ಶಿ ತಜಿಂದರ್ ಬಗ್ಗಾ ಸೇರಿದಂತೆ ಬಿಜೆಪಿಯ ಹಲವಾರು ನಾಯಕರು ಮತ್ತು ಬಿಜೆಪಿ ಬೆಂಬಲಿತ ಸಾಮಾಜಿಕ ಜಾಲತಾಣ ಇನ್ಫ್ಲುಯೆನ್ಸರ್‌ಗಳು ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ವೈರಲ್ ಆಗಿರುವ ಈ ಸುಳ್ಳು ಸುದ್ದಿಯನ್ನು ಹರಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯಲ್ಲಿ ಫಾಲೋ ಮಾಡುತ್ತಿರುವ ಅರ್ಪಿತಾ ಚಟರ್ಜಿ ಎಂಬ ಬಿಜೆಪಿ ಬೆಂಬಲಿಗರು ಮತ್ತು ಇನ್ಫ್ಲುಯೆನ್ಸರ್‌ ಕೂಡ ಈ ಚಿತ್ರವನ್ನು ಹಂಚಿಕೊಂಡಿದ್ದು, “ಇದು ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ರಾಜಕಾರಣದ ಬಗ್ಗೆ ಎಲ್ಲವನ್ನೂ ತಿಳಿಸುತ್ತದೆ” ಎಂಬ ಒಕ್ಕಣೆಯೊಂದಿಗೆ ಈ ತಪ್ಪು ಮಾಹಿತಿಯನ್ನು ಹರಡಲು ಸಹಾಯ ಮಾಡಿದ್ದಾರೆ.

ಬಿಜೆಪಿ ಬೆಂಬಲಿತ ಇನ್ನೂ ಅನೇಕ ನಾಯಕರು ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ ವ್ಯಕ್ತಿಗಳು ಈ ಸುಳ್ಳು ಸುದ್ದಿಯನ್ನು ಹಂಚಿಕೊಳ್ಳುವ ಮೂಲಕ ಅದನ್ನು ಮತ್ತಷ್ಟು ಪಸರಿಸಿದ್ದಾರೆ. ಈ ಪೋಸ್ಟ್‌ಗಳು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಅವುಗಳನ್ನು ಇಲ್ಲಿ ನೋಡಬಹುದು 1, 2, 3

ಫ್ಯಾಕ್ಟ್‌ಚೆಕ್‌ : ಮೇನಕಾ ಗುರುಸ್ವಾಮಿ ಅವರು ಸುಪ್ರೀಂ ಕೋರ್ಟ್ ಮುಂದೆ ಪಶ್ಚಿಮ ಬಂಗಾಳ ಸರ್ಕಾರದ ವಕೀಲರಾಗಿ ಹಾಜರಾಗಿದ್ದರು, ಆರೋಪಿಯ ಪರವಾಗಿ ಅಲ್ಲ ಎಂದು ಖ್ಯಾತ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ ಆಲ್ಟ್ ನ್ಯೂಸ್ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ಅಬ್ಸರ್ವರ್ (Supreme Court Observer) ವರದಿ ಮಾಡಿರುವಂತೆ, ಅರ್‌ಜಿ ಕರ್‌ ಪ್ರಕರಣದಲ್ಲಿ  ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ವಕೀಲೆ ಮೇನಕಾ ಗುರುಸ್ವಾಮಿ ಸೇರಿದಂತೆ ಇತರರು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ಮತ್ತು ಅವರ ತಂಡವು ಕೇಂದ್ರೀಯ ತನಿಖಾ ದಳವನ್ನು (ಸಿಬಿಐ) ಪ್ರತಿನಿಧಿಸಿತ್ತು.

ದಿ ಟೆಲಿಗ್ರಾಫ್ ವರದಿಯ ಪ್ರಕಾರ, ಸಂತ್ರಸ್ತೆಗೆ ನ್ಯಾಯ ಒದಗಿಸುವ ಬದಲು ತನ್ನನ್ನು ಸಮರ್ಥಿಸಿಕೊಳ್ಳಲು ಪಶ್ಚಿಮ ಬಂಗಾಳ ಸರ್ಕಾರವು ಅತಿಯಾದ ಕಾನೂನು ಯಂತ್ರವನ್ನು ಬಳಸುತ್ತಿದೆಯೆಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೇನಕಾ ಗುರುಸ್ವಾಮಿ ಅವರು ಕಾನೂನು ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತೊಂದೆಡೆ, ಆರೋಪಿ ಸಂಜಯ್ ರಾಯ್‌ನ ವಿಚಾರಣೆ ನಡೆದ ಸೀಲ್ದಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ, ಸೌರವ್ ಬಂಡೋಪಾಧ್ಯಾಯ, ಸುಬ್ರತಾ ಕುಮಾರ್ ಗಿರಿ, ಕವಿತಾ ಸರ್ಕಾರ್ ಮತ್ತು ಸಂಜುತಿ ಚಕ್ರವರ್ತಿ ಸೇರಿದಂತೆ ಕಾನೂನು ನೆರವು ರಕ್ಷಣಾ ಮಂಡಳಿಯ (ಎಲ್‌ಎಡಿಸಿ) ವಕೀಲರ ತಂಡವು ಆತನನ್ನು ಪ್ರತಿನಿಧಿಸಿತ್ತು. ಆರೋಪಿಯು ಯಾವುದೇ ವಕೀಲರನ್ನು ಹೊಂದಿಲ್ಲದ ಸಂದರ್ಭದಲ್ಲಿ ಎಲ್‌ಎಡಿಸಿ ಕಾರ್ಯರೂಪಕ್ಕೆ ಬರುತ್ತದೆ. ಸಂವಿಧಾನದ 39ಎ ವಿಧಿಯ ಅಡಿಯಲ್ಲಿ ಸೀಲ್ದಾ ನ್ಯಾಯಾಲಯವು ಈ ಎಲ್‌ಎಡಿಸಿ ವಕೀಲರನ್ನು ನೇಮಿಸಿತ್ತು. ಈ ವಿಧಿಯು ವಕೀಲರನ್ನು ನೇಮಿಸಿಕೊಳ್ಳಲು ಆರ್ಥಿಕ ಶಕ್ತಿಯಿಲ್ಲದವರಿಗೆ ಅಥವಾ ವಕೀಲರು ಸ್ವಯಂಪ್ರೇರಿತರಾಗಿ ಯಾರ ಪರ ವಾದಿಸಲು ಸಿದ್ಧರಿಲ್ಲದ ಅಂತಹ ಪ್ರಕರಣಗಳಲ್ಲಿ ಉಚಿತ ಕಾನೂನು ನೆರವು ನೀಡುವುದನ್ನು ಖಾತರಿಪಡಿಸುತ್ತದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸುಪ್ರೀಂ ಕೋರ್ಟ್ ವಕೀಲೆ ಮತ್ತು ಈಗ ತೃಣಮೂಲ ಕಾಂಗ್ರೆಸ್ ಸಂಸದೆಯಾಗಿರುವ ಮೇನಕಾ ಗುರುಸ್ವಾಮಿ ಅವರು ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರೋಪಿಯ ಪರವಾಗಿ ವಾದ ಮಂಡಿಸಿಲ್ಲ. ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ಪರ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. 21 ವಕೀಲರ ತಂಡದಲ್ಲಿ ಈಕೆ ಕೂಡ ಒಬ್ಬರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...