Homeಫ್ಯಾಕ್ಟ್‌ಚೆಕ್FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ...

FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿ, ಮತ್ಯಾರು ಅಲ್ಲ” ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಬಲಪಂಥೀಯ ಯೂಟ್ಯೂಬ್ ಚಾನೆಲ್‌ ಟಿವಿ ವಿಕ್ರಮ ವರದಿ ಮಾಡಿದೆ.

ಜುಲೈ 3, 2024ರಂದು “ಸೋನಿಯಾ ಗಾಂಧಿ ಕಾಲಿಗೆ ಅಡ್ಡಡ್ಡ ಬಿದ್ರು ಖರ್ಗೆ! ಛೀ ಎಂಥಾ ಗುಲಾಮಗಿರಿ ಇದು!” ಎಂಬ ಶೀರ್ಷಿಕೆಯಲ್ಲಿ ಯೂಟ್ಯೂಬ್‌ನಲ್ಲಿ ಟಿವಿ ವಿಕ್ರಮ ವಿಡಿಯೋ ಅಪ್ಲೋಡ್ ಮಾಡಿದೆ. ವಿಡಿಯೋದಲ್ಲಿ ‘ಮಿರ್ಚಿ ಮಂಡಕ್ಕಿ’ ಎಂಬ ವಿಶೇಷ ಕಾರ್ಯಕ್ರಮದ ನಿರೂಪಕಿ ಶ್ವೇತಾ ಅವರು ಈ ಕೆಳಗಿನಂತೆ ಹೇಳಿದ್ದಾರೆ.

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿಯವರು, ಮತ್ಯಾರು ಅಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನರನ್ನು ಮರೆತಿದ್ದಾರೆ.”

“ಖರ್ಗೆಯವರೇ ಕಲಬುರಗಿ ಜನರು ನಿಮಗೆ ಮತ ಹಾಕದಿದ್ದಿದ್ರೆ, ಆಶಿರ್ವಾದ ಮಾಡಿಲ್ಲದ್ದಿದ್ರೆ, ಸತತವಾಗಿ ಗೆಲ್ಲಿಸದಿದ್ದಿದ್ರೆ ಸೋನಿಯಾ ಗಾಂಧಿ ಬಿಡಿ, ಅವರ ಮನೆ ನಾಯಿ ಕೂಡ ನಿಮ್ಮನ್ನು ಮೂಸುತ್ತಿರಲಿಲ್ಲ. ಊರ ಮಂದಿಗೆ ಅವಮಾನ ಮಾಡಿ ಬಿಟ್ರಲ್ಲ ನೀವು. ಅದಕ್ಕೆ ಅನ್ಸುತ್ತೆ ನೀವು ಹೋದ ಸಲ ಎಲ್ಲಿ ಸೋತಿದ್ರೋ, ಅಲ್ಲಿ ಈ ಬಾರಿ ಎಲೆಕ್ಷನ್ ಸಹವಾಸಕ್ಕೆ ಬಂದಿಲ್ಲ. ಆದ್ರೂ ಕುಟುಂಬ ರಾಜಕಾರಣ ಬಿಡ್ಲಿಲ್ಲ ನೋಡ್ರಿ. ಅಳಿಯನಿಗೆ ಟಿಕೆಟ್ ಕೊಟ್ರಲ್ಲ. ಈ ಏರಿದ ಏಣಿ ಒದಿಯುವಂತಹ ಕೆಲಸ ಮಾಡಬಾರದು. ಮುಂದೆ ಒಂದು ದಿನ ಅದೇ ಅಪಾಯ ತರುತ್ತದೆ.”

ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಭೆಯಲ್ಲಿ ಮಾತನಾಡುವಾಗ “ನನ್ನನ್ನು ಈ ಸ್ಥಾನಕ್ಕೆ ತಂದವರು ಇಲ್ಲಿ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು” ಎಂದು ಪಕ್ಕದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರಿಗೆ ಕೈ ತೋರಿಸುವ ವಿಡಿಯೋ ತುಣುಕು ಕೂಡ ಟಿವಿ ವಿಕ್ರಮ ಪ್ರಸಾರ ಮಾಡಿದೆ.

ಫ್ಯಾಕ್ಟ್‌ಚೆಕ್ : ಟಿವಿ ವಿಕ್ರಮ ಹೇಳಿದಂತೆ ಮಲ್ಲಿಕಾರ್ಜುನ ಖರ್ಗೆಯವರು ತನ್ನನ್ನು ಉನ್ನತ ಸ್ಥಾನಕ್ಕೇರಿಸಿದ ಕಲಬುರಗಿಯ ಜನತೆಯನ್ನು ಮರೆತ್ರಾ? ತನ್ನ ಸಾಧನೆಯ ಎಲ್ಲಾ ಕ್ರೆಡಿಟ್ ಸೋನಿಯಾ ಗಾಂಧಿಯವರಿಗೆ ಮಾತ್ರ ಕೊಟ್ರಾ? ಎಂದು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುವಂತಹ ಸುದ್ದಿ ಪ್ರಸಾರ ಮಾಡಿರುವುದು ಗೊತ್ತಾಗಿದೆ.

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಗಮನಿಸಲು ನಾವು ಮೊದಲು ಅವರ ಭಾಷಣದ ಪೂರ್ಣ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಜುಲೈ 2ರಂದು ಇಂಡಿಯಾ ಟುಡೇ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ “Sonia Gandhi Made Me: Mallikarjun Kharge’s Fiery Reply To Jagdeep Dhankhar In Rajya Sabha” ಎಂಬ ಶೀರ್ಷಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಈ ವಿಡಿಯೋದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸ್ಪೀಕರ್‌ ಜಗದೀಪ್‌ ಧನ್ಕರ್‌ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ವಾಗ್ವಾದವನ್ನು ನೋಡಬಹುದಾಗಿದೆ.

“ನನ್ನನ್ನು ಈ ಸ್ಥಾನಕ್ಕೆ ಬರುವಂತೆ ಮಾಡಿದವರು ಇಲ್ಲೇ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು. ಇದಕ್ಕೆ ಜೈರಾಮ್‌ ರಮೇಶ್‌ ಅಥವಾ ನೀವು (ಸ್ಪೀಕರ್‌) ಕಾರಣವಲ್ಲ, ನನ್ನನ್ನು ಜನ ಈ ಸ್ಥಾನಕ್ಕೆ ತಂದಿದ್ದಾರೆ” ಎಂಬ ಅರ್ಥದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಆದರೆ, ಇದರಲ್ಲಿ “ಜನರು ನನ್ನನ್ನು ಇಲ್ಲಿಗೆ ತಂದಿದ್ದಾರೆ” ಎಂಬ ಕ್ಲಿಪ್‌ ಅನ್ನು ಕಟ್‌ ಮಾಡಿ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಹಂಚಿಕೊಂಡಿದೆ.

ಆದರೆ, ಇದರ ಅಸಲಿ ವಿಡಿಯೋವನ್ನು ಕಾಂಗ್ರೆಸ್‌ ಬೆಂಬಲಿಗರು ಸೇರಿದಂತೆ ಹಲವರು ತಮ್ಮ ಎಕ್ಸ್‌ ಖಾತೆಯಲ್ಲಿ ಎಡಿಟೆಡ್‌ ವಿಡಿಯೋ ಮತ್ತು ನಿಜವಾದ ವಿಡಿಯೋ ಯಾವುದು ಎಂದು ಹಂಚಿಕೊಂಡಿದ್ದಾರೆ.

ಅರ್ಧಂಬರ್ಧ ವಿಡಿಯೋವನ್ನು ಟಿವಿ ವಿಕ್ರಮ ಮಾತ್ರವಲ್ಲದೆ ಸದಾ ಸುಳ್ಳು ಸುದ್ದಿಗಳನ್ನು ಹರಡುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಹಂಚಿಕೊಂಡು ” ಇದು ಕಾಂಗ್ರೆಸ್‌ನ ಮೆಚ್ಚುಗೆಯ ಬ್ರ್ಯಾಂಡ್‌ನಂತೆ ತೋರುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರು “ನನ್ನನ್ನು ಈ ಸ್ಥಾನಕ್ಕೆ ತಂದಿರುವುದು ಸೋನಿಯಾ ಗಾಂಧಿಯವರು ಮತ್ತು ಜನರು” ಎಂದು ಹೇಳಿದ್ದಾರೆ. ಆದರೆ, ಟಿವಿ ವಿಕ್ರಮ ‘ಸೋನಿಯಾ ಗಾಂಧಿಯವರು’ ಎಂದು ಹೇಳುವ ಅರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ.

ಮಹೇಶ್ ವಿಕ್ರಮ್ ಹೆಗ್ಡೆ ನೇತೃತ್ವದ ಟಿವಿ ವಿಕ್ರಮ ಮತ್ತು ಪೋಸ್ಟ್ ಕಾರ್ಡ್‌ ಈ ಹಿಂದೆಯೂ ಹಲವು ಬಾರಿ ಸುಳ್ಳು ಮತ್ತು ದಾರಿ ತಪ್ಪಿಸುವಂತಹ ಸುದ್ದಿಗಳನ್ನು ಪ್ರಸಾರ ಮಾಡಿತ್ತು. ಈ ಕುರಿತು ನಾನುಗೌರಿ ನಡೆಸಿರುವ ಕೆಲವು ಫ್ಯಾಕ್ಟ್‌ಚೆಕ್ ಸುದ್ದಿಗಳ ಲಿಂಕ್‌ಗಳು ಕೆಳಗಿದೆ.

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...