Homeಫ್ಯಾಕ್ಟ್‌ಚೆಕ್FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ...

FACT CHECK : ಎಡಿಟೆಡ್ ವಿಡಿಯೋ ಮೂಲಕ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿ, ಮತ್ಯಾರು ಅಲ್ಲ” ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನತೆಗೆ ಅವಮಾನ ಮಾಡಿದ್ದಾರೆ ಎಂದು ಬಲಪಂಥೀಯ ಯೂಟ್ಯೂಬ್ ಚಾನೆಲ್‌ ಟಿವಿ ವಿಕ್ರಮ ವರದಿ ಮಾಡಿದೆ.

ಜುಲೈ 3, 2024ರಂದು “ಸೋನಿಯಾ ಗಾಂಧಿ ಕಾಲಿಗೆ ಅಡ್ಡಡ್ಡ ಬಿದ್ರು ಖರ್ಗೆ! ಛೀ ಎಂಥಾ ಗುಲಾಮಗಿರಿ ಇದು!” ಎಂಬ ಶೀರ್ಷಿಕೆಯಲ್ಲಿ ಯೂಟ್ಯೂಬ್‌ನಲ್ಲಿ ಟಿವಿ ವಿಕ್ರಮ ವಿಡಿಯೋ ಅಪ್ಲೋಡ್ ಮಾಡಿದೆ. ವಿಡಿಯೋದಲ್ಲಿ ‘ಮಿರ್ಚಿ ಮಂಡಕ್ಕಿ’ ಎಂಬ ವಿಶೇಷ ಕಾರ್ಯಕ್ರಮದ ನಿರೂಪಕಿ ಶ್ವೇತಾ ಅವರು ಈ ಕೆಳಗಿನಂತೆ ಹೇಳಿದ್ದಾರೆ.

“ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದು ಸೋನಿಯಾ ಗಾಂಧಿಯವರು, ಮತ್ಯಾರು ಅಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತನ್ನನ್ನು ಹಲವಾರು ಬಾರಿ ಆಯ್ಕೆ ಮಾಡಿ ಸಂಸತ್‌ಗೆ ಕಳುಹಿಸಿರುವ ಕಲಬುರಗಿಯ ಜನರನ್ನು ಮರೆತಿದ್ದಾರೆ.”

“ಖರ್ಗೆಯವರೇ ಕಲಬುರಗಿ ಜನರು ನಿಮಗೆ ಮತ ಹಾಕದಿದ್ದಿದ್ರೆ, ಆಶಿರ್ವಾದ ಮಾಡಿಲ್ಲದ್ದಿದ್ರೆ, ಸತತವಾಗಿ ಗೆಲ್ಲಿಸದಿದ್ದಿದ್ರೆ ಸೋನಿಯಾ ಗಾಂಧಿ ಬಿಡಿ, ಅವರ ಮನೆ ನಾಯಿ ಕೂಡ ನಿಮ್ಮನ್ನು ಮೂಸುತ್ತಿರಲಿಲ್ಲ. ಊರ ಮಂದಿಗೆ ಅವಮಾನ ಮಾಡಿ ಬಿಟ್ರಲ್ಲ ನೀವು. ಅದಕ್ಕೆ ಅನ್ಸುತ್ತೆ ನೀವು ಹೋದ ಸಲ ಎಲ್ಲಿ ಸೋತಿದ್ರೋ, ಅಲ್ಲಿ ಈ ಬಾರಿ ಎಲೆಕ್ಷನ್ ಸಹವಾಸಕ್ಕೆ ಬಂದಿಲ್ಲ. ಆದ್ರೂ ಕುಟುಂಬ ರಾಜಕಾರಣ ಬಿಡ್ಲಿಲ್ಲ ನೋಡ್ರಿ. ಅಳಿಯನಿಗೆ ಟಿಕೆಟ್ ಕೊಟ್ರಲ್ಲ. ಈ ಏರಿದ ಏಣಿ ಒದಿಯುವಂತಹ ಕೆಲಸ ಮಾಡಬಾರದು. ಮುಂದೆ ಒಂದು ದಿನ ಅದೇ ಅಪಾಯ ತರುತ್ತದೆ.”

ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯ ಸಭೆಯಲ್ಲಿ ಮಾತನಾಡುವಾಗ “ನನ್ನನ್ನು ಈ ಸ್ಥಾನಕ್ಕೆ ತಂದವರು ಇಲ್ಲಿ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು” ಎಂದು ಪಕ್ಕದಲ್ಲಿ ಕುಳಿತಿದ್ದ ಸೋನಿಯಾ ಗಾಂಧಿಯವರಿಗೆ ಕೈ ತೋರಿಸುವ ವಿಡಿಯೋ ತುಣುಕು ಕೂಡ ಟಿವಿ ವಿಕ್ರಮ ಪ್ರಸಾರ ಮಾಡಿದೆ.

ಫ್ಯಾಕ್ಟ್‌ಚೆಕ್ : ಟಿವಿ ವಿಕ್ರಮ ಹೇಳಿದಂತೆ ಮಲ್ಲಿಕಾರ್ಜುನ ಖರ್ಗೆಯವರು ತನ್ನನ್ನು ಉನ್ನತ ಸ್ಥಾನಕ್ಕೇರಿಸಿದ ಕಲಬುರಗಿಯ ಜನತೆಯನ್ನು ಮರೆತ್ರಾ? ತನ್ನ ಸಾಧನೆಯ ಎಲ್ಲಾ ಕ್ರೆಡಿಟ್ ಸೋನಿಯಾ ಗಾಂಧಿಯವರಿಗೆ ಮಾತ್ರ ಕೊಟ್ರಾ? ಎಂದು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುವಂತಹ ಸುದ್ದಿ ಪ್ರಸಾರ ಮಾಡಿರುವುದು ಗೊತ್ತಾಗಿದೆ.

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಗಮನಿಸಲು ನಾವು ಮೊದಲು ಅವರ ಭಾಷಣದ ಪೂರ್ಣ ವಿಡಿಯೋ ಹುಡುಕಿದ್ದೇವೆ. ಈ ವೇಳೆ ಜುಲೈ 2ರಂದು ಇಂಡಿಯಾ ಟುಡೇ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ “Sonia Gandhi Made Me: Mallikarjun Kharge’s Fiery Reply To Jagdeep Dhankhar In Rajya Sabha” ಎಂಬ ಶೀರ್ಷಕೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋ ದೊರೆತಿದೆ.

ಈ ವಿಡಿಯೋದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸ್ಪೀಕರ್‌ ಜಗದೀಪ್‌ ಧನ್ಕರ್‌ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಡುವೆ ನಡೆದ ವಾಗ್ವಾದವನ್ನು ನೋಡಬಹುದಾಗಿದೆ.

“ನನ್ನನ್ನು ಈ ಸ್ಥಾನಕ್ಕೆ ಬರುವಂತೆ ಮಾಡಿದವರು ಇಲ್ಲೇ ಕುಳಿತಿದ್ದಾರೆ, ಶ್ರೀಮತಿ ಸೋನಿಯಾ ಗಾಂಧಿಯವರು. ಇದಕ್ಕೆ ಜೈರಾಮ್‌ ರಮೇಶ್‌ ಅಥವಾ ನೀವು (ಸ್ಪೀಕರ್‌) ಕಾರಣವಲ್ಲ, ನನ್ನನ್ನು ಜನ ಈ ಸ್ಥಾನಕ್ಕೆ ತಂದಿದ್ದಾರೆ” ಎಂಬ ಅರ್ಥದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹೇಳಿಕೆ ನೀಡಿದ್ದಾರೆ. ಆದರೆ, ಇದರಲ್ಲಿ “ಜನರು ನನ್ನನ್ನು ಇಲ್ಲಿಗೆ ತಂದಿದ್ದಾರೆ” ಎಂಬ ಕ್ಲಿಪ್‌ ಅನ್ನು ಕಟ್‌ ಮಾಡಿ ಟಿವಿ ವಿಕ್ರಮ ಅರ್ಧಂಬರ್ಧ ವಿಡಿಯೋ ಹಂಚಿಕೊಂಡಿದೆ.

ಆದರೆ, ಇದರ ಅಸಲಿ ವಿಡಿಯೋವನ್ನು ಕಾಂಗ್ರೆಸ್‌ ಬೆಂಬಲಿಗರು ಸೇರಿದಂತೆ ಹಲವರು ತಮ್ಮ ಎಕ್ಸ್‌ ಖಾತೆಯಲ್ಲಿ ಎಡಿಟೆಡ್‌ ವಿಡಿಯೋ ಮತ್ತು ನಿಜವಾದ ವಿಡಿಯೋ ಯಾವುದು ಎಂದು ಹಂಚಿಕೊಂಡಿದ್ದಾರೆ.

ಅರ್ಧಂಬರ್ಧ ವಿಡಿಯೋವನ್ನು ಟಿವಿ ವಿಕ್ರಮ ಮಾತ್ರವಲ್ಲದೆ ಸದಾ ಸುಳ್ಳು ಸುದ್ದಿಗಳನ್ನು ಹರಡುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಹಂಚಿಕೊಂಡು ” ಇದು ಕಾಂಗ್ರೆಸ್‌ನ ಮೆಚ್ಚುಗೆಯ ಬ್ರ್ಯಾಂಡ್‌ನಂತೆ ತೋರುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಒಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರು “ನನ್ನನ್ನು ಈ ಸ್ಥಾನಕ್ಕೆ ತಂದಿರುವುದು ಸೋನಿಯಾ ಗಾಂಧಿಯವರು ಮತ್ತು ಜನರು” ಎಂದು ಹೇಳಿದ್ದಾರೆ. ಆದರೆ, ಟಿವಿ ವಿಕ್ರಮ ‘ಸೋನಿಯಾ ಗಾಂಧಿಯವರು’ ಎಂದು ಹೇಳುವ ಅರ್ಧ ವಿಡಿಯೋ ಪ್ರಸಾರ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ.

ಮಹೇಶ್ ವಿಕ್ರಮ್ ಹೆಗ್ಡೆ ನೇತೃತ್ವದ ಟಿವಿ ವಿಕ್ರಮ ಮತ್ತು ಪೋಸ್ಟ್ ಕಾರ್ಡ್‌ ಈ ಹಿಂದೆಯೂ ಹಲವು ಬಾರಿ ಸುಳ್ಳು ಮತ್ತು ದಾರಿ ತಪ್ಪಿಸುವಂತಹ ಸುದ್ದಿಗಳನ್ನು ಪ್ರಸಾರ ಮಾಡಿತ್ತು. ಈ ಕುರಿತು ನಾನುಗೌರಿ ನಡೆಸಿರುವ ಕೆಲವು ಫ್ಯಾಕ್ಟ್‌ಚೆಕ್ ಸುದ್ದಿಗಳ ಲಿಂಕ್‌ಗಳು ಕೆಳಗಿದೆ.

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

FACT CHEK : ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಎಂದು ರಾಹುಲ್ ಗಾಂಧಿ ಹೇಳಿಲ್ಲ

Fact Check : ಜೆಎನ್‌ಯು ಚುನಾವಣೆಯ ಕುರಿತು ಸುಳ್ಳು ಸುದ್ದಿ ಪ್ರಕಟಿಸಿದ ಸುವರ್ಣ ನ್ಯೂಸ್‌, ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...