Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...