Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...