Homeಫ್ಯಾಕ್ಟ್‌ಚೆಕ್FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ...

FACT CHECK : ರಾಜಸ್ಥಾನದಿಂದ ಬೆಂಗಳೂರಿಗೆ ನಾಯಿ ಮಾಂಸ ತರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಟಿವಿ ವಿಕ್ರಮ

- Advertisement -
- Advertisement -

ಜುಲೈ 26, 2024ರಂದು ಬೆಂಗಳೂರಿನ ಮಾಂಸ ವ್ಯಾಪಾರಿ ಅಬ್ದುಲ್ ರಝಾಕ್ ಎಂಬವರು ರಾಜಸ್ಥಾನದಿಂದ ರೈಲಿನ ಮೂಲಕ ತಂದ ಕುರಿ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಹಿಂದೂ ಸಂ​ಘಟನೆಯ ಪುನೀತ್​ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು. ಈ ಸಂಬಂಧ ಬೆಂಗಳೂರಿನ ಮೆಜೆಸ್ಟಿಕ್‌ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ರಝಾಕ್ ಮತ್ತು ಪುನೀತ್ ತಂಡದ ನಡುವೆ ಮಾತಿನ ಚಕಮಕಿ ನಡೆದಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ್ದ ಪೊಲೀಸರು, ಪರಿಸ್ಥಿತಿ ನಿಯಂತ್ರಿಸಿ ಪುನೀತ್ ಕೆರೆಹಳ್ಳಿ ಸೇರಿದಂತೆ ಕೆಲವರನ್ನು ಬಂಧಿಸಿದ್ದರು.

ಇದೇ ವೇಳೆ ಬಿಬಿಎಂಪಿಯ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಮಾಂಸದ ಮಾದರಿಯನ್ನು ತೆಗೆದುಕೊಂಡು ಹೋಗಿದ್ದರು. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು‌ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದರು.

“ಬೆಂಗಳೂರು ನಗರಕ್ಕೆ ಬಂದ ಜೈಪುರ–ಮೈಸೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ 120 ಬಾಕ್ಸ್‌ಗಳಲ್ಲಿ 4,500 ಕೆ.ಜಿಯಷ್ಟು ನಾಯಿಯ ಮಾಂಸ ತರಲಾಗಿದೆ. ಇದನ್ನು ಅಬ್ದುಲ್ ರಝಾಕ್ ಮಾಲೀಕತ್ವದ ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನಿತ್ಯ ನೂರಾರು ಬಾಕ್ಸ್‌ನಲ್ಲಿ ಮಾಂಸ ತರಲಾಗುತ್ತಿದೆ” ಎಂದು ಪುನೀತ್‌ ಕೆರೆಹಳ್ಳಿ ಮತ್ತು ತಂಡ ಆರೋಪಿಸಿತ್ತು.

ಈ ಆರೋಪವನ್ನೆ ಆಧಾರವಾಗಿಟ್ಟುಕೊಂಡು ಬಲಪಂಥೀಯ ಯೂಟ್ಯೂಬ್ ಚಾನೆಲ್ ಟಿವಿ ವಿಕ್ರಮ “ಮುಸ್ಲಿಂ ವ್ಯಾಪಾರಿಗಳು ಹಿಂದೂಗಳಿಗೆ ನಾಯಿ ಮಾಂಸ ತಿನ್ನಿಸುವ ಮೂಲಕ ಮೋಸ ಮಾಡುತ್ತಿದ್ದಾರೆ” ಎಂಬ ಕೋಮು ದ್ವೇಷದ ನಿರೂಪಣೆಯೊಂದಿಗೆ ಕಾರ್ಯಕ್ರಮ ರೂಪಿಸುವುದಲ್ಲದೆ, ಮುಸ್ಲಿಮರೇ ಈ ಕೃತ್ಯದ ವಿರುದ್ದ ಧನಿ ಎತ್ತಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.

ಸುದ್ದಿಯಲ್ಲಿ ಟಿವಿ ವಿಕ್ರಮದ ನಿರೂಪಕಿ ಹೀಗೆ ಹೇಳುತ್ತಾರೆ, “ಇಲ್ಲಿಯವರೆಗೆ ರಾಜ್ಯದಲ್ಲಿ ಗೋವುಗಳು ಮಾತ್ರ ಸೇಫ್ ಅಲ್ಲ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ನಾಯಿಗಳಿಗೂ ಸೇಫ್ ಇಲ್ಲ. ಬೀದಿ ನಾಯಿಗಳು ಖಾಲಿಯಾದ ಮೇಲೆ ಅಬ್ದುಲ್ ರಝಾಕ್ ಆಂಡ್ ಗ್ಯಾಂಗ್ ಮನೆಯಲ್ಲಿ ಸಾಕು ನಾಯಿಗಳನ್ನು ಕದ್ದು ನಾಯಿ ಮಾಂಸ ಮಾರಾಟ ಮಾಡಬಹುದು”.

ಹಾಗಿದ್ದರೆ ಟಿವಿ ವಿಕ್ರಮ ನಿರೂಪಕಿ ಆರೋಪಿಸಿದಂತೆ ಪುನೀತ್ ಕೆರೆಹಳ್ಳಿ ಮತ್ತು ತಂಡ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಮಾಡಿದ ವೇಳೆ ಸಿಕ್ಕ ಬಾಕ್ಸ್‌ಗಳಲ್ಲಿ ಇದ್ದದ್ದು ನಾಯಿ ಮಾಂಸ ಎಂಬುವುದು ನಿಜವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಪುನೀತ್ ಕೆರೆಹಳ್ಳಿ ಮತ್ತು ತಂಡ ಆರೋಪಿಸಿದಂತೆ ಅಬ್ದುಲ್ ರಝಾಕ್ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿರುವುದು ಮೇಕೆ ಮಾಂಸ. ಅದರಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂಬುವುದು ಸುಳ್ಳು ಎಂದು ಗೊತ್ತಾಗಿದೆ. ಸ್ವತಃ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರೇ ಈ ವಿಚಾರವನ್ನು ದೃಢಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವರು, “ಮಾಂಸದ ವ್ಯಾಪಾರಿ ರಾಜಸ್ಥಾನದಿಂದ ಪ್ರತಿ ವಾರಕ್ಕೆ, 15 ದಿನಗಳಿಗೊಮ್ಮೆ ಅಥವಾ ಬೇಕಾದ ಸಂದರ್ಭದಲ್ಲಿ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ಅನಾವಶ್ಯಕವಾಗಿ ಏನೇನೂ ದುರುದ್ದೇಶ ಇಟ್ಟುಕೊಂಡು ಗಲಾಟೆ ಮಾಡುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ರವಾನಿಸಿದ್ದಾರೆ.

ರಾಜ್ಯದ ಗೃಹ ಸಚಿವರೇ ಹೇಳಿರುವಂತೆ ಪ್ರಯೋಗಾಲಯದಿಂದ ಬಂದಿರುವ ವರದಿಯಲ್ಲಿ ರಾಜಸ್ಥಾನದಿಂದ ಬಂದಿರುವುದು ನಾಯಿ ಮಾಂಸವಲ್ಲ ಮೇಕೆ ಮಾಂಸ ಎಂದು ದೃಢಪಟ್ಟಿದೆ. ಹಾಗಾದರೆ, ಟಿವಿ ವಿಕ್ರಮ ತಂಡ ಹೀಗೆ ಸುಳ್ಳು ಸುದ್ದಿ ಪ್ರಸಾರ ಮಾಡಿರುವ ಹಿಂದಿನ ಉದ್ದೇಶವಾದರೂ ಏನು? ಇವರ ಮೇಲೆ ಯಾವುದೇ ಕ್ರಮವಿಲ್ಲವೇ ಎಂದು ಸಾರ್ಜವನಿಕರು ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಕಾರಣಕ್ಕೆ ಮುಸ್ಲಿಂ ಧರ್ಮಗುರುವನ್ನು ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...