Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...