Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...