Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...