Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...