Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...