Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...