Homeಕರ್ನಾಟಕ'ಫ್ಯಾಕ್ಟ್ ಚೆಕ್‌' ಘಟಕ ವಿಚಾರ: ನಮ್ಮದು ಯುಪಿ ಸರ್ಕಾರವಲ್ಲ, ಕಾನೂನಿಗೆ ವಿರುದ್ಧ ಏನನ್ನೂ ಮಾಡುವುದಿಲ್ಲ; ಎಡಿಟರ್ಸ್...

‘ಫ್ಯಾಕ್ಟ್ ಚೆಕ್‌’ ಘಟಕ ವಿಚಾರ: ನಮ್ಮದು ಯುಪಿ ಸರ್ಕಾರವಲ್ಲ, ಕಾನೂನಿಗೆ ವಿರುದ್ಧ ಏನನ್ನೂ ಮಾಡುವುದಿಲ್ಲ; ಎಡಿಟರ್ಸ್ ಗಿಲ್ಡ್‌ಗೆ ಖರ್ಗೆ ಉತ್ತರ

- Advertisement -
- Advertisement -

ಮಾಧ್ಯಮ ಸಂಸ್ಥೆಗಳ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ‘ನಕಲಿ ಸುದ್ದಿ’ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್‌’ ಘಟಕ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿಧಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)  ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮದು ಉತ್ತರಪ್ರದೇಶ ಸರ್ಕಾರವಲ್ಲ. ನಮ್ಮ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ಸರ್ಕಾರದ ನಿರ್ಣಯ ಕುರಿತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)ಗೆ ಪತ್ರ ಬರೆಯುತ್ತೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಕೂಡ ಮಾಡಿದ್ದು, ”ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಒಪ್ಪಿಕೊಂಡಂತೆ, ಆನ್‌ಲೈನ್ ಕ್ಷೇತ್ರವು ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸವಾಲನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳ ಅನುಷ್ಠಾನದ ಅಗತ್ಯವಿದೆ” ಎಂದಿದ್ದಾರೆ.

”ನಮ್ಮ ಸತ್ಯ-ಪರಿಶೀಲನಾ ಘಟಕವು ಪಕ್ಷಪಾತ ರಹಿತವಾದ ಅರಾಜಕೀಯ ನಿಲುವನ್ನು ಎತ್ತಿಹಿಡಿಯುತ್ತದೆ ಮತ್ತು ಸಾರ್ವಜನಿಕರಿಗೆ ಬಳಸುವ ವಿಧಾನಗಳನ್ನು ಪಾರದರ್ಶಕವಾಗಿ ವಿವರಿಸುತ್ತದೆ ಎಂದು ಗೌರವಾನ್ವಿತ ಸಂಸ್ಥೆಗೆ ನಾನು ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

”ಇದಲ್ಲದೆ, ನಾವು ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ, ಅದು ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

”ಕರ್ನಾಟಕ ಸರ್ಕಾರ ಬಸವಣ್ಣ ಮತ್ತು ಬಾಬಾಸಾಹೇಬರ ವಿಚಾರಧಾರೆಗಳಿಗೆ ಬದ್ಧವಾಗಿದೆ. ಖಚಿತವಾಗಿರಿ, ನಾವು ನೈಸರ್ಗಿಕ ನ್ಯಾಯದ ತತ್ವಗಳನ್ನು ಶ್ರದ್ಧೆಯಿಂದ ಅನುಸರಿಸುತ್ತೇವೆ. ಈ ಘಟಕದ ಸ್ಥಾಪನೆಯು ಯಾವುದೇ ರೀತಿಯಲ್ಲೂ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನವಲ್ಲ” ಎಂದು ದ್ಪಷ್ಟಪಡಿಸಿದ್ದಾರೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದ್ದೇನು?

‘ಫ್ಯಾಕ್ಟ್ ಚೆಕ್‌’ ಘಟಕ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ), ”ಆನ್ಲೈನ್‌ನಲ್ಲಿ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಇರುವುದು ನಿಜ. ಆದರೆ ಅಂತಹ ವಿಷಯವನ್ನು ಗುರುತಿಸುವ ಹಾಗೂ ತೆಗೆದುಹಾಕುವ ಪ್ರಯತ್ನಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲದಿದ್ದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ. ಯಾವುದೇ ಮೇಲ್ವಿಚಾರಣಾ ಚೌಕಟ್ಟು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು, ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹಾಳು ಮಾಡಬಾರದು ಎಂದು ಹೇಳಿತ್ತು. ಅಲ್ಲದೆ, ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಹಾಗೂ ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...