Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ...

FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

- Advertisement -
- Advertisement -

“ಅಸ್ಸಾಂನಲ್ಲಿ ಕಾಜಲ್ ಎಂಬ ಹುಡುಗಿಯೊಬ್ಬಳು ಶಮ್ಮೀ ಅಲಿಯಾಸ್ ಶಬೀರ್ ಮಿಯಾನ್ ಎಂಬ ಮುಸ್ಲಿಂ ಹುಡುಗನ ಜೊತೆ ಲೀವ್ ಇನ್ ಸಂಬಂಧದಲ್ಲಿದ್ದಳು. ಶಬೀರ್ ಆಕೆಯನ್ನು ಅತ್ಯಾಚಾರವೆಸಗಿದ್ದ, ನಂತರ ಪ್ರಜ್ಞಾ ಹೀನಾಳಾಗಿದ್ದ ಹುಡುಗಿಯನ್ನು ಆತ ಜೀವಂತವಾಗಿ ಫ್ರಿಜ್ಡ್‌ನಲ್ಲಿಟ್ಟಿದ್ದ. ಇದರಿಂದ ಆಕೆ ಸಾವನ್ನಪ್ಪಿದ್ದಳು. ಬಳಿಕ ಫ್ರಿಡ್ಜ್‌ನಿಂದ ಮೃತದೇಹ ಹೊರ ತೆಗೆದು ಸುಮಾರು 8 ದಿನಗಳ ಕಾಲ ಶಬೀರ್ ಮತ್ತು ಆತನ ಗೆಳೆಯರು ಹುಡುಗಿಯ ಶವದ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋವೊಂದನ್ನು ಹಂಚಿಕೊಳ್ಳಲಾಗಿದೆ.

ಅನೇಕರು ಒಂದೇ ರೀತಿಯ ಫೋಟೋ ಮತ್ತು ಸಂದೇಶವನ್ನು ಸಾಮಾಜಿಕ ಜಾತಾಣಗಳಾದ ಫೇಸ್‌ಬುಕ್, ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಕೋಮು ಆಯಾಮ ಪಡೆದಿರುವುದರಿಂದ ನಾವು ಅದರ ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸಿದ್ದೇವೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಫೋಟೋ ಹಾಗೂ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಇದಕ್ಕಾಗಿ ಕೀ ವರ್ಡ್‌ಗಳನ್ನು ಬಳಸಿ ಅಂತರ್ಜಾಲದಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಘಟನೆ ಕುರಿತು ಯಾವುದೇ ರೀತಿಯ ವರದಿಗಳು ನಮಗೆ ಕಂಡು ಬಂದಿಲ್ಲ. ಒಂದು ವೇಳೆ ಇಂತಹ ಘಟನೆ ನಡೆದಿರುವುದು ನಿಜವೇ ಆಗಿದ್ದರೆ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಮಾಧ್ಯಮಗಳು ವರದಿಯನ್ನು ಮಾಡಬೇಕಿತ್ತು, ಆದರೆ ಅಂತಹ ವರದಿಗಳು ಕಂಡು ಬಂದಿಲ್ಲ.

ವೈರಲ್ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 2010 ರಲ್ಲಿ ‘ಡಾಕ್ಯುಮೆಂಟಿಂಗ್ ರಿಯಾಲಿಟಿ’ ಎಂಬ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಕಂಡು ಬಂದಿದೆ. ಆ ವರದಿಯಲ್ಲಿನ ಅಂಶಕ್ಕೂ ವೈರಲ್‌ ಪೋಸ್ಟ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುವುದನ್ನು ನಮಗೆ ಸ್ಪಷ್ಟವಾಗಿದೆ. “ಈ ವರದಿಯ ಪ್ರಕಾರ ಬ್ರೆಜಿಲ್‌ನ ಗ್ರೇಟರ್ ಸಾವೊ ಪಾಲೊ ಪ್ರದೇಶದಲ್ಲಿ, ಒಸಾಸ್ಕೊದ 45 ವರ್ಷದ ವ್ಯಕ್ತಿ ಆತನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಶವವನ್ನು ಫ್ರಿಡ್ಜ್‌ನಲ್ಲಿ ಬಚ್ಚಿಟ್ಟಿದ್ದಾನೆ. ಈ ವಿಷಯ ತಿಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಇನ್ನು ವೈರಲ್ ಫೋಟೋ ಮತ್ತು ಸಂದೇಶ ಈ ಹಿಂದೆ 2022ರಲ್ಲೂ ಹರಿದಾಡಿತ್ತು. ಆಗ ಅಸ್ಸಾಂ ಪೊಲೀಸರು ತಮ್ಮಅಧಿಕೃತ ಎಕ್ಸ್‌ ಖಾತೆಯಲ್ಲಿ 8 ಡಿಸೆಂಬರ್ 2022 ರಂದು “ಈ ಫೋಟೋ ಪೋರ್ಚುಗೀಸ್ ಬ್ಲಾಗ್‌ನಲ್ಲಿ 2010 ರಲ್ಲಿ ಪ್ರಕಟಿಸಿದ್ದರು. ಈಗ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಇಂತಹ ಸುಳ್ಳು ಪೋಸ್ಟ್‌ಗಳನ್ನು ಶೇರ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದರು.

ಒಟ್ಟಿನಲ್ಲಿ, ಹಳೆಯ ಮತ್ತು ಸಂಬಂಧವಿಲ್ಲದ ಫೋಟೋವನ್ನು ಸುಳ್ಳು, ಕೋಮು ದ್ವೇಷಪೂರಿತ ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...