Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...