Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...