Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...