Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...