Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...