Homeಫ್ಯಾಕ್ಟ್‌ಚೆಕ್FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು...

FACT CHECK : ವಯನಾಡ್‌ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಲಾ ಪ್ರದೇಶಗಳಲ್ಲಿ ಜುಲೈ 30,2024ರಂದು ಸಂಭವಿಸಿದ ಭೀಕರ ಭೂಕುಸಿತ, ಜಳಪ್ರಳಯ ಸುಮಾರು 300ರಷ್ಟು ಜನರನ್ನು ಬಲಿ ಪಡೆದಿದೆ. ಎರಡು ಗ್ರಾಮಗಳೇ ನಾಮಾವಶೇಷವಾಗಿವೆ. ಈ ಘಟನೆ ದೇಶದ ಅತಿ ದೊಡ್ಡ ದುರಂತಗಳಲ್ಲಿ ಒಂದಾಗಿದೆ.

ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಧಾವಿಸಿರುವ ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ತಂಡಗಳು, ಜಿಲ್ಲಾಡಳಿತದ ಸಿಬ್ಬಂದಿ, ಹಲವಾರು ಸಂಘ-ಸಂಸ್ಥೆಗಳ ಸ್ವಯಂ ಸೇವಕರೂ ಮತ್ತು ಸ್ಥಳೀಯರು ರಕ್ಷಣೆ ಮತ್ತು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದಾರೆ.

ನೂರಾರು ಸಂಘಟನೆಗಳು, ಸಂಸ್ಥೆಗಳು ದುರಂತದಲ್ಲಿ ಬದುಕುಳಿದವರಿಗೆ ಬೇಕಾದ ಆಹಾರ ಸೇರಿದಂತೆ ಇತರ ಅತ್ಯಗತ್ಯ ಸಾಮಗ್ರಿಗಳನ್ನು ಪೂರೈಸುವ ಮಹತ್ಕಾರ್ಯ ಮಾಡುತ್ತಿವೆ. ದೇಶದ ವಿವಿಧ ಭಾಗಗಳಿಂದ ವಯನಾಡ್‌ಗೆ ಸಹಾಯಹಸ್ತ ಹರಿದು ಬರುತ್ತಿದೆ. ಕರ್ನಾಟಕ ಸೇರಿದಂತೆ ರಾಜ್ಯ ಸರ್ಕಾರಗಳು, ಕೇಂದ್ರ ಸರ್ಕಾರ ಕೂಡ ಪರಿಹಾರ ಕಾರ್ಯದಲ್ಲಿ ತೊಡಗಿದೆ.

ಈ ನಡುವೆ ಕೆಲವು ರಾಜಕೀಯ, ಕೋಮುವೈಷಮ್ಯ, ಅಮಾನವೀಯ ವರ್ತನೆಗಳು ಕೂಡ ನಡೆಯುತ್ತಿದೆ. ಅನೇಕ ಅಮಾನವೀಯರು ಸಾಮಾಜಿಕ ಜಾಲತಾಣಗಳ ಪೋಸ್ಟ್‌, ಕಾಮೆಂಟ್‌ಗಳ ಮೂಲಕ ಪ್ರಕೃತಿ ದುರಂತಕ್ಕೆ ಕೋಮು ವಿಷ ತಾಕಿಸಿ ವಿಘ್ನ ಸಂತೋಷಪಡುತ್ತಿದ್ದಾರೆ. ಇವೆಲ್ಲದರ ಹೊರತಾಗಿ ಸೇವಾ ಕಾರ್ಯಗಳ ಕ್ರೆಡಿಟ್ ಪಡೆಯುವುದರಲ್ಲಿ ಪೈಪೋಟಿಯೂ ಏರ್ಪಟ್ಟಿದೆ.

ವಯನಾಡ್‌ ದುರಂತ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌) ಆಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ವಿತರಿಸುವ ಮೂಲಕ ಹಗಲು-ರಾತ್ರಿ ಸಾಂತ್ವನ ಕಾರ್ಯದಲ್ಲಿ ತೊಡಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಲಯಾಳಂ ನಟಿ ನಿಖಿಲಾ ವಿಮಲ್ ಮತ್ತು ಒಂದಷ್ಟು ಯುವಜನರು ಅಗತ್ಯ ವಸ್ತುಗಳನ್ನು ಪ್ಯಾಕ್‌ ಮಾಡುತ್ತಿರುವ ವಿಡಿಯೋವೊಂದನ್ನು ಆರ್‌ಎಸ್‌ಎಸ್‌ನ “ನಮಸ್ತೆ ಸದಾ ವತ್ಸಲೆ ಮಾತೃಭೂಮಿ” ಗೀತೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದಲ್ಲದೆ ಇನ್ನೂ ಕೆಲ ಫೋಟೋ, ವಿಡಿಯೋಗಳು ಆರ್‌ಎಸ್‌ಎಸ್‌ನ ಹೆಸರಿನಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಆರ್‌ಎಸ್‌ಎಸ್‌ ಹೆಸರಿನಲ್ಲಿ ಹರಿದಾಡುತ್ತಿರುವ ನಟಿ ನಿಖಿಲಾ ವಿಮಲ್ ಕಾಣಿಸಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಆ ವಿಡಿಯೋ ಡೆಮಾಕ್ರಟಿಕ್ ಯೂಥ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ) ಸಂಘಟನೆಗೆ ಸಂಬಂಧಿಸಿದ್ದು ಎಂದು ತಿಳಿದು ಬಂದಿದೆ.

“ವಯನಾಡ್‌ಗೆ ಅಗತ್ಯ ವಸ್ತುಗಳನ್ನು ಪ್ಯಾಕ್ ಮಾಡಲು ಮತ್ತು ರವಾನಿಸಲು ಡಿವೈಎಫ್ಐ ಸ್ಥಾಪಿಸಿದ ಕಣ್ಣೂರಿನ ತಳಿಪರಂಬ ಸಂಗ್ರಹ ಕೇಂದ್ರದಲ್ಲಿ ಸ್ವಯಂ ಸೇವಕರೊಂದಿಗೆ ನಟಿ ನಿಖಿಲಾ ಕೈ ಜೋಡಿಸಿದರು” ಎಂದು ಮಾಧ್ಯಮ ವರದಿಗಳು ಹೇಳಿವೆ.

ವರದಿ ಆಧರಿಸಿ ಡಿವೈಎಫ್‌ ಕೇರಳದ ಇನ್‌ಸ್ಟಾಗ್ರಾಂ ಪೇಜ್‌ ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅಲ್ಲೂ ವಿಡಿಯೋ ಲಭ್ಯವಾಗಿದೆ.

ಇನ್ನು ಆರ್‌ಎಸ್‌ಎಸ್‌ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಅಗತ್ಯ ಸಾಮಾಗ್ರಿಗಳನ್ನು ನೀಡುತ್ತಿರುವ ಫೋಟೋಗಳು ಕೂಡ ವಯನಾಡ್‌ಗೆ ಸಂಬಂಧಿಸಿದಲ್ಲ. ಅದು 2018ರದ್ದು ಎಂದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ವಯನಾಡ್‌ ಭೂಕುಸಿತ ಸ್ಥಳದಲ್ಲಿ ಆರ್‌ಎಸ್‌ಎಸ್‌ನ ಸೇವಾಭಾರತಿ ಸ್ವಯಂ ಸೇವಾ ಸಂಘಟನೆ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ನಿಜ. ಆದರೆ, ವೈರಲ್ ಆಗಿರುವ ವಿಡಿಯೋ, ಫೋಟೋಗಳು ಅದಕ್ಕೆ ಸಂಬಂಧಿಸಿದಲ್ಲ. ಆರ್‌ಎಸ್‌ಎಸ್‌ ಮಾತ್ರವಲ್ಲದೆ, ಎಸ್‌ವೈಎಸ್‌ ಸಾಂತ್ವನ, ಇಸಾಬಾ, ಎಸ್‌ಎಸ್‌ಎಫ್, ಎಸ್‌ಕೆಎಸ್‌ಎಸ್‌ಎಫ್‌ ವಿಖಾಯ, ಎಸ್‌ಡಿಪಿಐ, ಯುವ ಕಾಂಗ್ರೆಸ್, ಜಾಮಿಅ ಮರ್ಕಝ್ ಸೇರಿದಂತೆ ಅನೇಕ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸಂಘ-ಸಂಸ್ಥೆಗಳು ವಯನಾಡ್‌ನಲ್ಲಿ ಸಾಂತ್ವನ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಹಿಂದೂಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಡಿಟೆಡ್ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...