Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ಪುರುಷರ ತಂಡವೊಂದು ಮಹಿಳೆಯೊಬ್ಬರನ್ನು ಎತ್ತಿಕೊಂಡು ಹೋಗಿ ವಾಹನದೊಳಕ್ಕೆ ತುರುಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೆಲವರು ಇದು ಬಾಂಗ್ಲಾದಲ್ಲಿ ಹಿಂದೂ ಮಹಿಳೆಯನ್ನು ಅಪಹರಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ.

‘ಕನ್ನಡ ನಾಡು ನುಡಿ ಜಲ’ ಎಂಬ ಫೇಸ್‌ಬುಕ್ ಗ್ರೂಪ್‌ನಲ್ಲಿ ಆಗಸ್ಟ್ 9,2024 ವಿಡಿಯೋ ಪೋಸ್ಟ್ ಮಾಡಿರುವ ಕುಮಾರ್ ಅಭಿನಯ್ ಎಂಬ ಬಳಕೆದಾರ “ಬಾಂಗ್ಲಾದೇಶ: ಹಾಡಹಗಲೇ ಅಪ್ರಾಪ್ತ ಹಿಂದೂ ಹುಡುಗಿಯನ್ನ ಅಪಹರಿಸಿದ ಮುಸಲ್ಮಾನರು. ಬಾಂಗ್ಲಾದೇಶದ ಹಿಂದೂಗಳ ಸ್ಥಿತಿ ಶೋಚನೀಯ” ಎಂದು ಬರೆದುಕೊಂಡಿದ್ದಾರೆ.

ಸಲ್ಮಾನ್‌ ಸೀಮಾ ಎಂಬ ಎಕ್ಸ್‌ ಬಳಕೆದಾರರು ಆಗಸ್ಟ್ 8, 2024ರಂದು ವಿಡಿಯೋ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಹಾಡಹಗಲೇ ಇಸ್ಲಾಮಿಸ್ಟ್‌ಗಳು ಅಪಹರಿಸಿದ್ದಾರೆ. ಇದೇ ರೀತಿಯ ದೃಶ್ಯಗಳನ್ನು ನಾವು ಬೇರೆಲ್ಲಿ ನೋಡಿದ್ದೇವೆ?. IRGC ಭಯೋತ್ಪಾದಕರು ಕೆಚ್ಚೆದೆಯ ಇರಾನಿನ ಮಹಿಳೆಯರ ಮೇಲೆ ದಾಳಿ ಮಾಡಿದಾಗ ಈ ರೀತಿಯ ಘಟನೆ ಕಂಡಿದ್ದೇವೆ. ಹಮಾಸ್, ಐಆರ್‌ಜಿಸಿ, ಐಸಿಸ್, ಹಿಜ್ಬುಲ್ಲಾ, ಹೌತಿಗಳು, ಬಾಂಗ್ಲಾದೇಶದ ಇಸ್ಲಾಮಿಸ್ಟ್‌ಗಳು, ನೈಜೀರಿಯಾದ ಬೊಕೊ ಹರಾಮ್ ಮತ್ತು ಅಲ್ ಖೈದಾ ಇವೆಲ್ಲವೂ ಒಂದೇ ಬೇರುಗಳು. ಸಿಸಿಪಿ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಪಾಕಿಸ್ತಾನದಿಂದ ಬೆಂಬಲಿತವಾಗಿರುವ ಈ ರೀತಿಯ ದಾಳಿಗಳು ಬಾಂಗ್ಲಾದೇಶದ ಭವಿಷ್ಯವನ್ನು ನಾಶಮಾಡುತ್ತವೆ. ಬಾಂಗ್ಲಾದೇಶಿ ಹಿಂದೂಗಳನ್ನು ಉಳಿಸಿ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಂಡಿರುವ ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್‌ ಶಾಟ್ ಹಾಕಿ ಸರ್ಚ್‌ ಮಾಡಿದಾಗ en.prothomalo.com ಎಂಬ ವೆಬ್‌ಸೈಟ್‌ವೊಂದು ಆಗಸ್ಟ್ 9, 2024ರಂದು ವಿಡಿಯೋ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ. ವರದಿಯಲ್ಲಿ ” ಕೌಟುಂಬಿಕ ಕಲಹದ ವಿಡಿಯೋವನ್ನು ಕೋಮುಗಲಭೆ ಅಥವಾ ದೌರ್ಜನ್ಯ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗಿದೆ” ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬಾಂಗ್ಲಾದೇಶ ನೊವಾಖಾಲಿಯ ಸೆನ್‌ಬಾಗ್‌ ಎಂಬಲ್ಲಿ ಕೌಟುಂಬಿದ ಕಲಹದಿಂದ ತವರು ಮನೆಗೆ ತೆರಳಿದ್ದ ಮಹಿಳೆಯನ್ನು ಆಕೆಯ ಪತಿ ಕೆಲ ವ್ಯಕ್ತಿಗಳೊಂದಿಗೆ ಕೂಡಿ ಒತ್ತಾಯಪೂರ್ವಕವಾಗಿ ಕರೆದೊಯ್ಯಲು ಮುಂದಾಗಿದ್ದಾನೆ. ಅದಕ್ಕೆ ಆಕೆ ವಿರೋಧ ವ್ಯಕ್ತಪಡಿಸಿದಾಗ, ಪತಿ ಮತ್ತು ಆತನ ಜೊತೆಗಿದ್ದವರು ಮಹಿಳೆಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ವಾಹನಕ್ಕೆ ಹತ್ತಿಸಲು ನೋಡಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಿದ್ದು, ಸ್ಥಳೀಯರು ಧಾವಿಸಿ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ. ಆಕೆಯ ಪತಿ ಮತ್ತು ಮೂವರನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರ ವಾಹನವನ್ನು ಹಾನಿಗೊಳಿಸಿದ್ದಾರೆ.

ಆಗಸ್ಟ್ 9, 2024ರಂದು ವೈರಲ್ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಸ್ಕ್ರೀನ್‌ ಶಾಟ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ಆಲ್ಟ್‌ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ” ಹೌದು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿರುವ ಹಲವಾರು ಘಟನೆಗಳು ವರದಿಯಾಗಿವೆ. ಆದರೆ @Salwan_Momika1 ಮತ್ತು ಓಪ್‌ಇಂಡಿಯಾ ಸಂಪಾದಕ @UnSubtleDesi ಹಂಚಿಕೊಂಡಿರುವ ಈ ನಿರ್ದಿಷ್ಟ ವಿಡಿಯೋಗೂ ಹಿಂದೂ-ಮುಸ್ಲಿಮರಿಗೆ ಯಾವುದೇ ಸಂಬಂಧವಿಲ್ಲ. ಹಿಂದೂ ಮಹಿಳೆಯನ್ನು ಅಪಹರಿಸಿದ ವ್ಯಕ್ತಿ ಆಕೆಯ ಮಾದಕ ವ್ಯಸನಿ ಹಿಂದೂ ಪತಿಯಾಗಿದ್ದು, 6 ತಿಂಗಳ ಹಿಂದೆ ಆಕೆಯಿಂದ ಬೇರ್ಪಟ್ಟಿದ್ದಾನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಒಟ್ಟಿನಲ್ಲಿ ಕೌಟುಂಬಿದ ಕಲಹದಿಂದ ತವರು ಮನೆ ಸೇರಿದ್ದ ಹಿಂದೂ ಮಹಿಳೆಯರನ್ನು ಆಕೆಯ ಪತಿ ಮತ್ತು ಆತನ ತಂಡ ಅಪಹರಿಸಿದ ವಿಡಿಯೋವನ್ನು ಬಾಂಗ್ಲಾದೇಶದಲ್ಲಿ ಹಿಂದೂ ಮಹಿಳೆಯನ್ನು ಮುಸ್ಲಿಮರು ಅಪಹರಿಸಿದ್ದಾರೆ ಎಂಬರ್ಥದಲ್ಲಿ ತಪ್ಪಾಗಿ ಹಂಚಿಕೊಳ್ಳುತ್ತಿರುವುದು ನಮ್ಮ ಪರಿಶೀಲನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...