Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...