Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...