Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...