Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...