Homeಫ್ಯಾಕ್ಟ್‌ಚೆಕ್ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್...

ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

- Advertisement -
- Advertisement -

ಕಳೆದ ವಾರ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಜನರಲ್ (ನಿವೃತ್ತ) ಲಾಯ್ಡ್ ಜೆ. ಆಸ್ಟಿನ್ ಅವರು ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದರು. ಮಾನವ ಹಕ್ಕುಗಳ ವಿಷಯದ ಬಗ್ಗೆ ಭಾರತೀಯ ಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು. (ಇದನ್ನು ಆಧರಿಸಿ ನಾನುಗೌರಿ.ಕಾಂ ಕೂಡ ವರದಿ ಮಾಡಿತ್ತು)

ಸಾಮಾಜಿಕ ಮಾಧ್ಯಮದಲ್ಲಿ ಎನ್‌ಡಿಟಿವಿ ಸುಳ್ಳು ವರದಿ ಮಾಡಿದೆ, ಅದು ಪಾಕಿಸ್ತಾನದ ಏಜೆಂಟ್ ಎಂದೆಲ್ಲ ಬಿಜೆಪಿ ಬೆಂಬಲಿಗರು ಎಂದು ಟೀಕಿಸಿದ್ದಾರೆ. ಎಎನ್‌ಐ ಟ್ವೀಟ್ ಒಂದರಲ್ಲಿ ಅಂತಹ ಚರ್ಚೆ ನಡೆದಿಲ್ಲ ಎಂದು ಹೇಳಿದ್ದನ್ನು ಆಧಾರವಾಗಿ ಇಟ್ಟುಕೊಂಡು ಎನ್‌ಡಿಟಿವಿ ಮೇಲೆ ಮುಗಿ ಬಿದ್ದಿದ್ದಾರೆ.

ಅವಿನಾಶ್ ಶ್ರೀವಾಸ್ತವ ಎನ್‌ಡಿಟಿವಿಯ ವರದಿಯನ್ನು ಎಎನ್‌ಐ ಟ್ವೀಟ್‌ನೊಂದಿಗೆ ಹೋಲಿಕೆ ಮಾಡಿದ್ದಾರೆ, ಎಎನ್‌ಐ ಟ್ವೀಟ್‌ನಲ್ಲಿ, ‘ಭಾರತೀಯ ಮೂಲಗಳು’ ತಿಳಿಸಿರುವಂತೆ ಮಾನವ ಹಕ್ಕುಗಳ ಕುರಿತು ಚರ್ಚೆ ನಡೆದಿಲ್ಲ ಎಂದಿದೆ.

ಇನ್ನೊಬ್ಬ ಬಳಕೆದಾರ ಅತುಲ್ ಅಹುಜಾ ಎನ್‌ಡಿಟಿವಿ ‘ಪಾಕಿಸ್ತಾನ ಮೀಡಿಯಾ ಹೌಸ್’ ಎಂದು ಬರೆದಿದ್ದಾರೆ. ಇನ್ನೂ ಹಲವರು ಇದೇ ಬಗೆಯ ಸಂದೇಶ ಹರಡಿದ್ದಾರೆ.

ಫ್ಯಾಕ್ಟ್-ಚೆಕ್

ಎನ್‌ಡಿಟಿವಿ ಮಾತ್ರ ಈ ರೀತಿಯ ಸುದ್ದಿ ವರದಿ ಮಾಡಿಲ್ಲ. ಹಲವಾರು ಮಾಧ್ಯಮಗಳು ಎನ್‌‌ಡಿಟಿವಿಯಂತೆಯೇ ವರದಿ ಮಾಡಿವೆ. ಆದರೆ ಬಿಜೆಪಿ ಬೆಂಬಲಿಗರಿಗೆ ಎನ್‌ಡಿಟಿವಿ, ದಿ ವೈರ್, ನ್ಯೂಸ್‌ಕ್ಲಿಕ್, ದಿ ಪ್ರಿಂಟ್ ನಂತಹ ಸ್ವತಂತ್ರ ಮಾಧ್ಯಮಗಳನ್ನು ಕಂಡರೆ ಆಗದೇನೋ? ಅದಿರಲಿ….

ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗಿನ ಸಭೆಯಲ್ಲಿ ಮಾನವ ಹಕ್ಕುಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವಾಸ್ತವವಾಗಿ, ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ‘ಉನ್ನತ ಮಟ್ಟದ ಮೂಲಗಳನ್ನು’ ಉಲ್ಲೇಖಿಸಿ ಎಎನ್‌ಐ ಮಾಡಿದ ಟ್ವೀಟ್ ಅನ್ನು ಸಾಮಾಜಿಕ ಮಾಧ್ಯಮದ ಬಿಜೆಪಿ ಬೆಂಬಲಿಗ ಬಳಕೆದಾರರು ಹಂಚಿಕೊಂಡಿದ್ದಾರೆ.
ಆದರೆ ಅದಕ್ಕೂ ಮೊದಲು ಇದೇ ಎಎನ್‌ಐ ‘ವಿಶ್ವಾಸಾರ್ಹ’ ಮೂಲಗಳನ್ನು ಉಲ್ಲೇಖಿಸಿ, “ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಮತ್ತು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ನಡುವೆ ನಡೆದ ಒಂದು ಗಂಟೆಯ ಚರ್ಚೆಯಲ್ಲಿ ಮಾನವ ಹಕ್ಕುಗಳ ವಿಷಯವೂ ಸಹ ಕಾಣಿಸಿಕೊಂಡಿದೆ’ ಎಂದು ವರದಿ ಮಾಡಿದೆ.

ಮೇಲಿನ ವರದಿಯ ಎರಡು ದಿನಗಳ ನಂತರ, ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಅವರೊಂದಿಗೆ ಭಾರತದಲ್ಲಿ ಮಾನವ ಹಕ್ಕುಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ‘ಉನ್ನತ ಮಟ್ಟದ ಭಾರತೀಯ ಮೂಲಗಳು’ ಖಚಿತಪಡಿಸುತ್ತವೆ ಎಂದು ಎಎನ್‌ಐ ಹೇಳಿಕೊಂಡಿದೆ. ಈ ಎರಡನೇ ಟ್ವೀಟ್ ಅಷ್ಟೇ ಬಿಜೆಪಿ ಬೆಂಬಲಿಗರಿಗೆ ಮುಖ್ಯವಾಗಿದೆ.

ಭಾರತದಲ್ಲಿ ಮಾನವ ಹಕ್ಕುಗಳ ವಿಷಯವನ್ನು ಅಮೆರಿಕದ ರಕ್ಷಣಾ ಕಾರ್ಯದರ್ಶಿಯೊಂದಿಗೆ ಚರ್ಚಿಸಲಾಗಿದೆಯೇ?

ಲಾಯ್ಡ್ ಜೆ ಆಸ್ಟಿನ್ ಭಾಗವಹಿಸಿದ ನಡೆದ ಸಮ್ಮೇಳನದ ಸಂಪೂರ್ಣ ಪ್ರತಿಲೇಖನವನ್ನು ಯುಎಸ್ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ. ಪ್ರಧಾನಿ ಮೋದಿ ಅವರೊಂದಿಗಿನ ಸಂವಾದದ ಸಂದರ್ಭದಲ್ಲಿ ಭಾರತದಲ್ಲಿ, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆಯ ವಿಷಯವನ್ನು ಎತ್ತಿದ್ದೀರಾ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿಯನ್ನು ಕೇಳಲಾಯಿತು.

ಪ್ರಧಾನ ಮಂತ್ರಿಯೊಂದಿಗೆ ಚರ್ಚಿಸಲು ತನಗೆ ಅವಕಾಶ ಸಿಗಲಿಲ್ಲ ಎಂದು ಆಸ್ಟಿನ್ ಉತ್ತರಿಸಿದರು ಆದರೆ ಅವರು ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂಭಾಷಣೆ ನಡೆಸಿದರು ಎಂದು ಹೇಳಿದ್ದಾರೆ ಎಂದು ಅಮೆರಿಕ ರಕ್ಷಣಾ ಇಲಾಖೆ ಅಪ್‌ಲೋಡ್ ಮಾಡಿದೆ.

ಅವರ ಉತ್ತರದ ವೀಡಿಯೊವನ್ನು ಸಹ ಕೆಳಗೆ ನೋಡಬಹುದು.

ಮಾನವ ಹಕ್ಕುಗಳ ಸಮಸ್ಯೆಯನ್ನು ಸಮ್ಮೇಳನದಲ್ಲಿ ತರಲಾಗಿಲ್ಲ ಎಂದು ಹೇಳಲು ಎಎನ್‌ಐ ‘ಮೂಲಗಳನ್ನು’ ಉಲ್ಲೇಖಿಸಿದೆ. ಚರ್ಚೆ ನಡೆದಿಲ್ಲ ಎಂದು ಭಾರತ ಸರ್ಕಾರ ನಿರಾಕರಣೆ ಮಾಡಿದ್ದು ದಾಖಲೆಯಲ್ಲಿಲ್ಲ. ಮತ್ತೊಂದೆಡೆ, ಅಮೆರಿಕವು ಆಸ್ಟಿನ್ ಹೇಳಿಕೆಯನ್ನು ದಾಖಲೆಯಲ್ಲಿ ಇರಿಸಿದೆ.

ಈ ದಾಖಲೆಯನ್ನು ಭಾರತ ಸರ್ಕಾರ ನಿರಾಕರಿಸಬೇಕಿದೆ ಎಂದು ಹಲವಾರು ಪತ್ರಕರ್ತರು ಗಮನಸೆಳೆದಿದ್ದಾರೆ.

ಅನೇಕ ಸುದ್ದಿವಾಹಿನಿಗಳು ನಡೆಸಿದ ವರದಿಗೆ ಎನ್‌ಡಿಟಿವಿಯನ್ನು ಮಾತ್ರ ಅನ್ಯಾಯವಾಗಿ ಗುರಿಯಾಗಿಸಲಾಗಿತ್ತು ಮಾತ್ರವಲ್ಲ, ಎನ್‌ಡಿಟಿವಿಯ ವರದಿ ತಪ್ಪಾಗಿಲ್ಲ ಎಂಬುದು ಸ್ಪಷ್ಟವಾಗಿದ್ದರೂ ಅದನ್ನು ಟೀಕಿಸಲಾಗಿತು. ಭಾರತದಲ್ಲಿ ಮಾನವ ಹಕ್ಕುಗಳ ಕುರಿತ ವಿಷಯವನ್ನು ಭಾರತೀಯ ಕ್ಯಾಬಿನೆಟ್ ಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಜೆ ಆಸ್ಟಿನ್ ಹೇಳಿಕೆ ದಾಖಲೆಯಲ್ಲಿದೆ.

ಆದರೆ ಎಎನ್‌ಐ ಮೊದಲಿಗೆ ಸರಿಯಾಗಿಯೇ ಟ್ವೀಟ್ ಮಾಡಿ, ನಂತರ ‘ಭಾರತ ಸರ್ಕಾರದ ಉನ್ನತ ಮೂಲಗಳನ್ನು’ ಆಧರಿಸಿ ಚರ್ಚೆ ನಡೆದಿಲ್ಲ ಎಂದಿದೆ. ಆದರೆ ಸರ್ಕಾರ ಚರ್ಚೆ ನಡೆದಿದೆ ಎಂಬುದನ್ನು ನಿರಾಕರಿಸಿಲ್ಲ.

ಅಂದರೆ, ಬೇಕೆಂತಲೇ ಎನ್‌ಡಿಟಿವಿ ವಿರುದ್ಧ ಬಿಜಿಪಿ ಬೆಂಬಲಿಗರು ಜಾಲತಾಣದಲ್ಲಿ ಅಪಪ್ರಚಾರ ಮಾಡಿದ್ದಾರೆ,

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ; ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....